22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು.

ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮ ಕಲಶದ ಪ್ರಯುಕ್ತ ದೇವಸ್ಥಾನದ ವತಿಯಿಂದ ರಚಿಸಿದ ಸಮಿತಿಯ ಸಭೆಯ ಅಧ್ಯಕ್ಷ ವಸಂತ ಗೌಡ ಮರಕಡ, ಗುತ್ತಿನ ಮನೆಯವರು ಊರ ಗಣ್ಯರು ಸಮಿತಿಯ ಸದಸ್ಯರು ಶ್ರಮದಾನ ಮಾಡಿದ ಶ್ರಮಿಕರು ಹಾಗೂ ದೇವಸ್ಥಾನದ ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆಯಿತು.

ಕ್ಷೇತ್ರದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಬ್ರಹ್ಮಕಲಶವನ್ನು ಮಾದರಿಯಾಗಿ ವಿಜೃಂಭಣೆಯಿಂದ ನಡೆಸುವ ಬಗ್ಗೆ ರೂಪು ರೇಷೆಗಳನ್ನು ವಿವರಿಸಿದರು. ಅಧ್ಯಕ್ಷರು ಉತ್ತಮ ರೀತಿಯಲ್ಲಿ ಬಳ್ಳಮಂಜ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವನ್ನು ಕೋರಿದರು. ಸಭೆಯಲ್ಲಿ ಈವರೆಗೆ ದೇಣಿಗೆ ನೀಡಿದ ದಾನಿಗಳ ಹೆಸರು ಖರ್ಚು ವೆಚ್ಚಗಳ ಮಾಹಿತಿಯನ್ನು ನೀಡಲಾಯಿತು. ಕ್ಷೇತ್ರದ ಸಿಬ್ಬಂದಿಗಳಾದ ಬಾಲಕೃಷ್ಣ ಬಿ ಸ್ವಾಗತಿಸಿ, ಸುಧೀರ್ ಶೆಟ್ಟಿ ಕೋರಬೆಟ್ಟು ಧನ್ಯವಾದವಿತ್ತರು.

Related posts

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!