25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ಫೆ.2ರಂದು ಜರಗಿತು.

ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ ಮತ್ತು ಉಜಿರೆ ಬೆಳಾಲು ‘ಶೌರ್ಯ’ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಸಂಚಾರ ಪೊಲೀಸ್ ಸಿಬ್ಬಂದಿ ಅಭಿಜಿತ್, ಬೆಳ್ತಂಗಡಿ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸ್ಟರ್ ಅವಿನಾಶ್ ಭಿಡೆ ಉಪಸ್ಥಿತರಿದ್ದರು.

ಊರಿನ ಆಟೊ ಚಾಲಕರು ಮತ್ತು ವಾಹನ ಮಾಲಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು. ಶೌರ್ಯ ತುರ್ತು ಸ್ಪಂದನಾ ಘಟಕದ ಸಂಯೋಜಕ ಸುಲೈಮಾನ್ ಭೀಮಂಡೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya
error: Content is protected !!