37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ ಪರಿಸರದಲ್ಲಿ ಚಿರತೆ ದಾಳಿಗೆ ನಾಯಿ ಬಲಿಯಾಗಿದೆ. ಆ ಪ್ರದೇಶದ ಜನರು ನಾಯಿಯನ್ನು ಹೊತ್ತುಕೊಂಡು ಹೋಗುತ್ತಿದ್ದ ಚಿರತೆಯನ್ನು ಕಂಡು ಭಯಭೀತರಾಗಿದ್ದಾರೆ. ಮನೆಯ ಕಿಟಕಿಯಲ್ಲಿ ಚಿರತೆ ಓಡಾಟವನ್ನು ಗಮನಿಸಿದ ನಿವಾಸಿಗಳು ಮನೆಯ ಬಾಗಿಲನ್ನು ಮುಚ್ಚಿ ಆತಂಕದಿಂದ ಕುಳಿತುಕೊಂಡಿದ್ದಾರೆ.

ಇನ್ನೂ ಈ ರಸ್ತೆ ಮೂಲಕ ಶಾಲಾ ಮಕ್ಕಳು ಅನೇಕ ಮಂದಿ ಉದ್ಯೋಗಿಗಳು ಸಂಚಾರಿಸುವ ದಾರಿಯಾಗಿದ್ದು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆ ಉದಯನಗರ ಬಳಿ ಕಾಣಿಸಿಕೊಂಡಿದ್ದ ಚಿರತೆ ಶೀಘ್ರವೇ ಬೆಳ್ತಂಗಡಿ ಪಟ್ಟಣ ತಲುಪುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

Related posts

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya
error: Content is protected !!