23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ ಪರಿಸರದಲ್ಲಿ ಚಿರತೆ ದಾಳಿಗೆ ನಾಯಿ ಬಲಿಯಾಗಿದೆ. ಆ ಪ್ರದೇಶದ ಜನರು ನಾಯಿಯನ್ನು ಹೊತ್ತುಕೊಂಡು ಹೋಗುತ್ತಿದ್ದ ಚಿರತೆಯನ್ನು ಕಂಡು ಭಯಭೀತರಾಗಿದ್ದಾರೆ. ಮನೆಯ ಕಿಟಕಿಯಲ್ಲಿ ಚಿರತೆ ಓಡಾಟವನ್ನು ಗಮನಿಸಿದ ನಿವಾಸಿಗಳು ಮನೆಯ ಬಾಗಿಲನ್ನು ಮುಚ್ಚಿ ಆತಂಕದಿಂದ ಕುಳಿತುಕೊಂಡಿದ್ದಾರೆ.

ಇನ್ನೂ ಈ ರಸ್ತೆ ಮೂಲಕ ಶಾಲಾ ಮಕ್ಕಳು ಅನೇಕ ಮಂದಿ ಉದ್ಯೋಗಿಗಳು ಸಂಚಾರಿಸುವ ದಾರಿಯಾಗಿದ್ದು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆ ಉದಯನಗರ ಬಳಿ ಕಾಣಿಸಿಕೊಂಡಿದ್ದ ಚಿರತೆ ಶೀಘ್ರವೇ ಬೆಳ್ತಂಗಡಿ ಪಟ್ಟಣ ತಲುಪುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!