ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ ಪರಿಸರದಲ್ಲಿ ಚಿರತೆ ದಾಳಿಗೆ ನಾಯಿ ಬಲಿಯಾಗಿದೆ. ಆ ಪ್ರದೇಶದ ಜನರು ನಾಯಿಯನ್ನು ಹೊತ್ತುಕೊಂಡು ಹೋಗುತ್ತಿದ್ದ ಚಿರತೆಯನ್ನು ಕಂಡು ಭಯಭೀತರಾಗಿದ್ದಾರೆ. ಮನೆಯ ಕಿಟಕಿಯಲ್ಲಿ ಚಿರತೆ ಓಡಾಟವನ್ನು ಗಮನಿಸಿದ ನಿವಾಸಿಗಳು ಮನೆಯ ಬಾಗಿಲನ್ನು ಮುಚ್ಚಿ ಆತಂಕದಿಂದ ಕುಳಿತುಕೊಂಡಿದ್ದಾರೆ.

ಇನ್ನೂ ಈ ರಸ್ತೆ ಮೂಲಕ ಶಾಲಾ ಮಕ್ಕಳು ಅನೇಕ ಮಂದಿ ಉದ್ಯೋಗಿಗಳು ಸಂಚಾರಿಸುವ ದಾರಿಯಾಗಿದ್ದು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆ ಉದಯನಗರ ಬಳಿ ಕಾಣಿಸಿಕೊಂಡಿದ್ದ ಚಿರತೆ ಶೀಘ್ರವೇ ಬೆಳ್ತಂಗಡಿ ಪಟ್ಟಣ ತಲುಪುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

Related posts

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಮುಂಡೂರು ಶ್ರೀನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಶ್ರೀನಾಗಬ್ರಹ್ಮ ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವ

Suddi Udaya
error: Content is protected !!