22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

ಉಜಿರೆಯ ರೋಟರಿ ಭವನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನ್ಯೂನತೆ ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣಗೊಳಿಸುವ ಕುರಿತು ಫೆ.2ರಂದು ಸಭೆ ಜರುಗಿತು.

ಕಾಶಿಬೆಟ್ಟಿನ ಅರಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆ ಇರುವ ಸಂಪರ್ಕ ರಸ್ತೆಯನ್ನು ಪಾದಾಚಾರಿಗಳಿಗೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಬೇಕು.ಕಾಶಿಬೆಟ್ಟಿನಲ್ಲಿ ಬಸ್ ತಂಗುದಾಣ ಈಗಿನಂತೆ ಇರಬೇಕು. ಹೆದ್ದಾರಿಯಿಂದ ಅರಳಿಯ ಜಿಲ್ಲಾ ಪಂಚಾಯಿತಿ ರಸ್ತೆ ಸಂಪರ್ಕ ಮಾಡುವ ಸರ್ವಿಸ್ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸಬೇಕು ಎಂಬ ವಿಚಾರಗಳ ಕುರಿತು ಚರ್ಚಿಸಲಾಯಿತು.


ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜ,ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಸಂಸದ ಬ್ರಿಜೇಶ್ ಚೌಟ, ಕೇಂದ್ರ ಸಚಿವ ನಿತಿನ್ ಗಡ್ಕರಿ ಉಜಿರೆ ಹಾಗೂ ಲಾಯಿಲ ಗ್ರಾಪಂಗಳಿಗೆ ಮನವಿ ನೀಡುವ ಕುರಿತು ನಿರ್ಣಯಿಸಲಾಯಿತು.

ಸಮಸ್ಯೆಗೆ ಸೂಕ್ತ ಪರಿಹಾರ ದೊರಕದೆ ಇದ್ದರೆ, ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು, ಕಾನೂನು ಹೋರಾಟ ಮಾಡಲು ಅರಳಿಯ ನಿವಾಸಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸಹಕಾರ ನೀಡುವ ಬಗ್ಗೆ ಪ್ರಸ್ತಾಪಿಸಲಾಯಿತು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್, ಪೂರ್ವಾಧ್ಯಕ್ಷರಾದ ಮನೋರಮಾ ಭಟ್, ಶ್ರೀಕಾಂತ ಕಾಮತ್, ಜಯರಾಮ್, ಪಂಚಾಯಿತಿ ಸದಸ್ಯ ಜಗನ್ನಾಥ ರೈ, ಸ್ಥಳೀಯರಾದ ಶ್ರೀಕಾಂತ ಕಾಮತ್, ಸುರೇಶ್, ಮೋಹಿನಿ, ಭಾಗ್ಯಜ್ಯೋತಿ, ಪ್ರಮೀಳಾ, ಕೃಷ್ಣ, ವಿಜಯ, ಜಯಾನಂದ, ಗಿರೀಶ್, ರವಿಕುಮಾರ್, ವಿನಯ ಕೃಷ್ಣ,ಶಿಲ್ಪಾ, ಅಜಯ್, ಭಾಗೀರಥಿ, ಸುಧಾಕರ್, ಸೃಜನ್ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Related posts

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!