23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

ಉಜಿರೆಯ ರೋಟರಿ ಭವನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನ್ಯೂನತೆ ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣಗೊಳಿಸುವ ಕುರಿತು ಫೆ.2ರಂದು ಸಭೆ ಜರುಗಿತು.

ಕಾಶಿಬೆಟ್ಟಿನ ಅರಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆ ಇರುವ ಸಂಪರ್ಕ ರಸ್ತೆಯನ್ನು ಪಾದಾಚಾರಿಗಳಿಗೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಬೇಕು.ಕಾಶಿಬೆಟ್ಟಿನಲ್ಲಿ ಬಸ್ ತಂಗುದಾಣ ಈಗಿನಂತೆ ಇರಬೇಕು. ಹೆದ್ದಾರಿಯಿಂದ ಅರಳಿಯ ಜಿಲ್ಲಾ ಪಂಚಾಯಿತಿ ರಸ್ತೆ ಸಂಪರ್ಕ ಮಾಡುವ ಸರ್ವಿಸ್ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸಬೇಕು ಎಂಬ ವಿಚಾರಗಳ ಕುರಿತು ಚರ್ಚಿಸಲಾಯಿತು.


ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜ,ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಸಂಸದ ಬ್ರಿಜೇಶ್ ಚೌಟ, ಕೇಂದ್ರ ಸಚಿವ ನಿತಿನ್ ಗಡ್ಕರಿ ಉಜಿರೆ ಹಾಗೂ ಲಾಯಿಲ ಗ್ರಾಪಂಗಳಿಗೆ ಮನವಿ ನೀಡುವ ಕುರಿತು ನಿರ್ಣಯಿಸಲಾಯಿತು.

ಸಮಸ್ಯೆಗೆ ಸೂಕ್ತ ಪರಿಹಾರ ದೊರಕದೆ ಇದ್ದರೆ, ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು, ಕಾನೂನು ಹೋರಾಟ ಮಾಡಲು ಅರಳಿಯ ನಿವಾಸಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸಹಕಾರ ನೀಡುವ ಬಗ್ಗೆ ಪ್ರಸ್ತಾಪಿಸಲಾಯಿತು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್, ಪೂರ್ವಾಧ್ಯಕ್ಷರಾದ ಮನೋರಮಾ ಭಟ್, ಶ್ರೀಕಾಂತ ಕಾಮತ್, ಜಯರಾಮ್, ಪಂಚಾಯಿತಿ ಸದಸ್ಯ ಜಗನ್ನಾಥ ರೈ, ಸ್ಥಳೀಯರಾದ ಶ್ರೀಕಾಂತ ಕಾಮತ್, ಸುರೇಶ್, ಮೋಹಿನಿ, ಭಾಗ್ಯಜ್ಯೋತಿ, ಪ್ರಮೀಳಾ, ಕೃಷ್ಣ, ವಿಜಯ, ಜಯಾನಂದ, ಗಿರೀಶ್, ರವಿಕುಮಾರ್, ವಿನಯ ಕೃಷ್ಣ,ಶಿಲ್ಪಾ, ಅಜಯ್, ಭಾಗೀರಥಿ, ಸುಧಾಕರ್, ಸೃಜನ್ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆರವರ ಎಲ್ ಬಿಡಬ್ಲೂ ಮತ್ತು ವಿದ್ಯಾಸಾರಥಿ ಮತ್ತು ಮನೋಸಾರಥಿ ಪುಸ್ತಕ ಬಿಡುಗಡೆ

Suddi Udaya
error: Content is protected !!