ಶಿಶಿಲ: ಇತ್ತೀಚಿಗಷ್ಟೇ ಊರವರ, ದಾನಿಗಳ, ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು. 1,50,000 ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಯಾದ ಯಶೋಧರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಶಶಿಕಲಾ, ಹಾಗೂ ಶಿಶಿಲ ಒಕ್ಕೂಟ ಅಧ್ಯಕ್ಷ ಕುಶಾಲಪ್ಪ ಗೌಡ. ಹೇವಾಜೆ, ಒಕ್ಕೂಟದ ಅಧ್ಯಕ್ಷ ಗಣೇಶ ಪ್ರಸಾದ್, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಮೋಹನ ಗೌಡ, ಪಂಚಾಯತ್ ಅಧ್ಯಕ್ಷ ಸುದೀನ್.ಡಿ.ಹಳೆ ವಿದ್ಯಾರ್ಥಿ ಕಮಿಟಿಯ ಸದ್ಯಸರಾದ ಪದ್ಮಯ ಗೌಡ. ಭುವನ್ ಕುಮಾರ್. ಶಾಲೆಯ ಶಿಕ್ಷಕ-ಶಿಕ್ಷಕಿ ಹಾಗೂ ಶಿಶಿಲ ಕಾರ್ಯಕ್ಷೇತ್ರದ ಸೇವಾ ಪ್ರತಿ ಮತ್ತು ಹೇವಾಜೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.











