23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜ.31 ಮತ್ತು ಫೆ. 1ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

ಜ.31ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ , ಮಹಾಪೂಜೆ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ರಂಗಪೂಜೆ ನಡೆಯಿತು.


ಫೆ.1 ರಂದು ಬೆಳಿಗ್ಗೆ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ, ಮಹಾಪೂಜೆ
ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ , , ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ ಮಂತ್ರಾಕ್ಷತೆ ನಡೆಯಿತು. ಸಾಯಂಕಾಲ ಊರವರಿಂದ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದುರ್ಗಾ ಫ್ರೆಂಡ್ಸ್ ಬೂಡುಮುಗೇರು ಇವರ ಪ್ರಾಯೋಜಕತ್ವದಲ್ಲಿ ಪೆರ್ಮೆದ ಕಲಾವಿದೆರ್ ಚೇಳ್ಳಾರು ಇವರು ಅಭಿನಯಿಸುವ “ಎನ್ನಿಲೆಕ ಇಜ್ಜೆರ್” ತುಳು ಹಾಸ್ಯಮಯ ನಾಟಕ ಜರುಗಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ರಾಜಗೋಪಾಲ ಯಂ. ಪಿ., ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ ಕೆ. ಉಡ್ಯೇರೆ, ಉಪಾಧ್ಯಕ್ಷ ಪದ್ಮಯ್ಯ ಗೌಡ ಉಡ್ಯೇರೆ, ಕಾರ್ಯದರ್ಶಿ ಟಿ. ರವಿಚಂದ್ರ ರಾವ್ ಅಂಗಡಿತೋಟ, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ ಅರಸಿನಮಕ್ಕಿ, ಅರ್ಚಕರಾದ ರಾಮಕೃಷ್ಣ ರಾವ್, ಅರವಿಂದ ಭಿಡೆ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!