ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

ಬೆಳ್ತಂಗಡಿ: ಯುವಕರಿಗೆ ಉದ್ಯೋಗ, ಕೃಷಿಕರಿಗೆ ಅನುಕೂಲ, ಗ್ರಾಮೀಣ ಪ್ರದೇಶಕ್ಕೆ ಸೌಲಭ್ಯ ನೀಡುವ ರೀತಿ ಬಜೆಟ್ ಇರಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಯಾರೂ ಊಹಿಸದ ರೀತಿಯಲ್ಲಿ ಕಳಪೆ ಮಟ್ಟದಲ್ಲಿ ಬಜೆಟ್ ಮಂಡಿಸಲಾಗಿದೆ.

ಕೇಂದ್ರದ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ದಕ್ಷಿಣ ಭಾರತವನ್ನು ಅದರಲ್ಲೂ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಮುಖ್ಯವಾಗಿ ಕೃಷಿಗೆ ಕಳೆದ ಬಾರಿಗಿಂತಲೂ ಕಡಿಮೆ ಬಜೆಟ್ ನಿಗದಿ‌ಮಾಡಿ ಅನ್ಯಾಯ ಮಾಡಿದೆ. ಯೂರಿಯಾ ಸಬ್ಸಿಡಿ ಕಡಿತ ಮಾಡಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಕಳೆದ ಬಾರಿ 1.70 ಲಕ್ಷಕೋಟಿ ರೂ. ಕೃಷಿಗೆ ನೀಡಲಾಗಿತ್ತು, ಈ ಬಾರಿ 1.62 ಲಕ್ಷ ಕೋಟಿ ರೂ. ನಿಗದಿ ಮಾಡಿದೆ. ಹೀಗಾದಲ್ಲಿ ಕೃಷಿಕರು ಬದುಕುವುದು ಹೇಗೆ‌. ಶ್ರೀಮಂತ ವರ್ಗದ ಓಲೈಕೆ ಮಾಡುವ ಭರದಲ್ಲಿ ದುಡಿಯುವ ವರ್ಗವನ್ನು ನಿರ್ಲಕ್ಷಿಸಲಾಗಿದೆ. ಇದೀಗ ಹವಾಮಾನ ‌ವಿಪರೀತ ಬದಲಾಗುತ್ತಿದ್ದು, ಕೃಷಿಕರು ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ, ಇಂತಹ ಸಂದರ್ಭದಲ್ಲೂ ಬೆಳೆ ವಿಮೆಯನ್ನು ಹೆಚ್ಚು ಮಾಡಿಲ್ಲ.

ಇನ್ನು ಪರಿಶಿಷ್ಟ ಜಾತಿ, ಪಂಗಡಗಳು ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಯಾವುದೇ ಆದ್ಯತೆ ನೀಡಿಲ್ಲ. ಇವುಗಳಲ್ಲಿ ತಾರತಮ್ಯ ನೀತಿ ಹಾಗೂ ಈ ವರ್ಗವನ್ನು ನಿರ್ಲಕ್ಷ್ಯ ಧೋರಣೆಯನ್ನು ಕೇಂದ್ರ ಅನುಸರಿಸಿದೆ. ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರಕಾರಕ್ಕೆ ನೀಡಬೇಕಾಗಿದ್ದ ತೆರಿಗೆ ಪಾಲಿನ ಹಣವನ್ನು ಸರಿಯಾಗಿ ನೀಡಿಲ್ಲ. ಕೇಂದ್ರ ಸರಕಾರಕ್ಕೆ ಬೇಕಾದ ದೊಡ್ಡ ಉದ್ಯಮಿಗಳಿಗೆ ಮತ್ತು ತೆರಿಗೆ ಕಳ್ಳರಿಗೆ ಹೆಚ್ಚಿನ ರಿಯಾಯಿತಿ ಮತ್ತು ಸೌಲಭ್ಯ ಕಲ್ಪಿಸಿದೆ. ಈ ಬಾರಿಯ ಬಜೆಟ್ ಸಾಮಾನ್ಯ ಜನರ ಜೀವನದಲ್ಲಿ ತಲ್ಲಣ ಸೃಷ್ಟಿಸಿದೆ.

Related posts

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!