23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು.

ಬೆಳಿಗ್ಗೆ ಗಣಹೋಮ, ಕಲಶ ಪೂಜೆ, ನಾಗ ತಂಬಿಲ, ದೈವಗಳಿಗೆ ತಂಬಿಲ ಸೇವೆ, ಹಸಿರುವಾಣಿ ಸಮರ್ಪಣೆ , ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ ‘ ನಡೆಯಿತು. ಸಂಜೆ ಶ್ರೀ ಕಲ್ಲುರ್ಟಿ, ಶ್ರೀ ವರ್ಣಾರ ಪಂಜುರ್ಲಿ, ಶ್ರೀ ಕೋಟೆ ಚಾಮುಂಡಿ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರ ಪಾಣಿ ರಾಧಾಕೃಷ್ಣ ಯಡಪಡಿತ್ತಾಯ , ಗೌರವ ಸಲಹೆಗಾರ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್ ಹಾರ, ಸದಸ್ಯರಾದ ಶಶಿ ಪುತ್ಯೆಮಜಲು, ಸುರೇಶ ಪಡಿಪಂಡ, ಜಯರಾಮ ನ್ಯೂ ಆರಿಗ, ಜಯಾನಂದ ಬಂಟ್ರಿಯಾಲ್, ದಾಮೋದರ ನ್ಯೂ ಆರಿಗ, ಜಯಂತಿ ಹಾರ, ಕುಸುಮ ಪೊಯ್ಯೊಳೆ, ಗಣೇಶ ಹಾರ, ಮೋನಪ್ಪ ಗೌಡ ಕೆಂಪಮುದೇಲು, ನಾಗೇಶ್ ಹಾರ, ದಾಮೋದರ ಮಡ್ಯಲಗುಂಡಿ, ಗಣೇಶ್ ಕಲಾಯಿ, ಮುತ್ತಪ್ಪ ಡೆಂಜ, ವಾಸುದೇವ ಮಂಡೆಕರ, ಬಾಬು ಪುತ್ಯೆಮಜಲು, ಶೇಖರ ಪೂಜಾರಿ, ಗೌರವ್ ಹೊಸಮಜಲು,
ದೈವದ ಪರಿಚಾರಕರಾದ ನೇಮಣ್ಣ ಗೌಡ, ದಾಮೋದರ ಪೂಜಾರಿ, ಹೊನ್ನಪ್ಪ ಗೌಡ , ಸುಂದರ ಗೌಡ , ಶೀನಪ್ಪ ಗೌಡ, ಆನಂದ ಗೌಡ , ವೆಂಕಟರಮಣ, ಮಾಯಿಲ ವಿಭಾಗದವರು, ಗುರುವ, ಹಾರ, ಮುಂಡ, ಪೊಯ್ಯೊಳೆ ಊರಿನ ಹತ್ತು ಸಮಸ್ತರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!