July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು.

ಬೆಳಿಗ್ಗೆ ಗಣಹೋಮ, ಕಲಶ ಪೂಜೆ, ನಾಗ ತಂಬಿಲ, ದೈವಗಳಿಗೆ ತಂಬಿಲ ಸೇವೆ, ಹಸಿರುವಾಣಿ ಸಮರ್ಪಣೆ , ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ ‘ ನಡೆಯಿತು. ಸಂಜೆ ಶ್ರೀ ಕಲ್ಲುರ್ಟಿ, ಶ್ರೀ ವರ್ಣಾರ ಪಂಜುರ್ಲಿ, ಶ್ರೀ ಕೋಟೆ ಚಾಮುಂಡಿ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರ ಪಾಣಿ ರಾಧಾಕೃಷ್ಣ ಯಡಪಡಿತ್ತಾಯ , ಗೌರವ ಸಲಹೆಗಾರ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್ ಹಾರ, ಸದಸ್ಯರಾದ ಶಶಿ ಪುತ್ಯೆಮಜಲು, ಸುರೇಶ ಪಡಿಪಂಡ, ಜಯರಾಮ ನ್ಯೂ ಆರಿಗ, ಜಯಾನಂದ ಬಂಟ್ರಿಯಾಲ್, ದಾಮೋದರ ನ್ಯೂ ಆರಿಗ, ಜಯಂತಿ ಹಾರ, ಕುಸುಮ ಪೊಯ್ಯೊಳೆ, ಗಣೇಶ ಹಾರ, ಮೋನಪ್ಪ ಗೌಡ ಕೆಂಪಮುದೇಲು, ನಾಗೇಶ್ ಹಾರ, ದಾಮೋದರ ಮಡ್ಯಲಗುಂಡಿ, ಗಣೇಶ್ ಕಲಾಯಿ, ಮುತ್ತಪ್ಪ ಡೆಂಜ, ವಾಸುದೇವ ಮಂಡೆಕರ, ಬಾಬು ಪುತ್ಯೆಮಜಲು, ಶೇಖರ ಪೂಜಾರಿ, ಗೌರವ್ ಹೊಸಮಜಲು,
ದೈವದ ಪರಿಚಾರಕರಾದ ನೇಮಣ್ಣ ಗೌಡ, ದಾಮೋದರ ಪೂಜಾರಿ, ಹೊನ್ನಪ್ಪ ಗೌಡ , ಸುಂದರ ಗೌಡ , ಶೀನಪ್ಪ ಗೌಡ, ಆನಂದ ಗೌಡ , ವೆಂಕಟರಮಣ, ಮಾಯಿಲ ವಿಭಾಗದವರು, ಗುರುವ, ಹಾರ, ಮುಂಡ, ಪೊಯ್ಯೊಳೆ ಊರಿನ ಹತ್ತು ಸಮಸ್ತರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya
error: Content is protected !!