22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಗೇರುಕಟ್ಟೆ ಸಮೀಪದ ಸಂಬೋಳ್ಯದ ಬಾಲಕ ಸುಮಂತ್ (15ವ) ನಿಗೂಢ ರೀತಿಯಲ್ಲಿ ಮೃತಪಟ್ಟಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸ್ ಇಲಾಖೆ ಪ್ರಕರಣವನ್ನು ಲಘುವಾಗಿ ಪರಿಗಣಿಸಿಲ್ಲ. ಈಗಾಗಲೇ 4 ವಿಶೇಷ ತಂಡಗಳ ಮೂಲಕ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಶೀಘ್ರ ಭೇದಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಸಭೆ ಅಧಿವೇಶನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಧನುಪೂಜೆಗೆಂದು ತೆರಳಿದ್ದ ಬಾಲಕ ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆಯ ಪ್ರಗತಿ ಕುರಿತು ತಿಳಿಸುವ ಜತೆಗೆ ಸತ್ಯಾಸತ್ಯತೆ ಪತ್ತೆ ಮಾಡಬೇಕು. ಆತ ಯುವ ವಿಜ್ಞಾನಿಯಾಗಿ ಹೆಸರು ಮಾಡಿದ್ದು, ಅಹಮದಾಬಾದ್‌ನಲ್ಲಿ ನಡೆಯ ಬೇಕಿದ್ದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೂ ಆಯ್ಕೆಯಾಗಿದ್ದ. ಜಿಲ್ಲೆಯ ಜನತೆ ಪ್ರಕರಣದ ಕುರಿತು ಆತಂಕ ವ್ಯಕ್ತಪಡಿಸಿದ್ದು ಪ್ರಕರಣವನ್ನು ಭೇದಿಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಶಾಸಕರು ಗೃಹ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮೃತ ಬಾಲಕನ ತಲೆಯಲ್ಲಿ ಗಾಯ ಕಂಡು ಬಂದಿರುವುದರಿಂದ ಬಿಎನ್‌ಎಸ್ ಎಸ್ 103 (1) ನಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಯಾಗಿದ್ದರೆ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಶಾಸಕರನ್ನೂ ವಿಶ್ವಾಸಕ್ಕೆ ಪಡೆದು ಪ್ರಕರಣವನ್ನು ಭೇದಿಸಲು ಇಲಾಖೆಗೆ ಸೂಚನೆ ನೀಡುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

Related posts

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!