32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು.

ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮ ಕಲಶದ ಪ್ರಯುಕ್ತ ದೇವಸ್ಥಾನದ ವತಿಯಿಂದ ರಚಿಸಿದ ಸಮಿತಿಯ ಸಭೆಯ ಅಧ್ಯಕ್ಷ ವಸಂತ ಗೌಡ ಮರಕಡ, ಗುತ್ತಿನ ಮನೆಯವರು ಊರ ಗಣ್ಯರು ಸಮಿತಿಯ ಸದಸ್ಯರು ಶ್ರಮದಾನ ಮಾಡಿದ ಶ್ರಮಿಕರು ಹಾಗೂ ದೇವಸ್ಥಾನದ ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆಯಿತು.

ಕ್ಷೇತ್ರದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಬ್ರಹ್ಮಕಲಶವನ್ನು ಮಾದರಿಯಾಗಿ ವಿಜೃಂಭಣೆಯಿಂದ ನಡೆಸುವ ಬಗ್ಗೆ ರೂಪು ರೇಷೆಗಳನ್ನು ವಿವರಿಸಿದರು. ಅಧ್ಯಕ್ಷರು ಉತ್ತಮ ರೀತಿಯಲ್ಲಿ ಬಳ್ಳಮಂಜ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವನ್ನು ಕೋರಿದರು. ಸಭೆಯಲ್ಲಿ ಈವರೆಗೆ ದೇಣಿಗೆ ನೀಡಿದ ದಾನಿಗಳ ಹೆಸರು ಖರ್ಚು ವೆಚ್ಚಗಳ ಮಾಹಿತಿಯನ್ನು ನೀಡಲಾಯಿತು. ಕ್ಷೇತ್ರದ ಸಿಬ್ಬಂದಿಗಳಾದ ಬಾಲಕೃಷ್ಣ ಬಿ ಸ್ವಾಗತಿಸಿ, ಸುಧೀರ್ ಶೆಟ್ಟಿ ಕೋರಬೆಟ್ಟು ಧನ್ಯವಾದವಿತ್ತರು.

Related posts

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!