September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು.

ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮ ಕಲಶದ ಪ್ರಯುಕ್ತ ದೇವಸ್ಥಾನದ ವತಿಯಿಂದ ರಚಿಸಿದ ಸಮಿತಿಯ ಸಭೆಯ ಅಧ್ಯಕ್ಷ ವಸಂತ ಗೌಡ ಮರಕಡ, ಗುತ್ತಿನ ಮನೆಯವರು ಊರ ಗಣ್ಯರು ಸಮಿತಿಯ ಸದಸ್ಯರು ಶ್ರಮದಾನ ಮಾಡಿದ ಶ್ರಮಿಕರು ಹಾಗೂ ದೇವಸ್ಥಾನದ ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆಯಿತು.

ಕ್ಷೇತ್ರದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಬ್ರಹ್ಮಕಲಶವನ್ನು ಮಾದರಿಯಾಗಿ ವಿಜೃಂಭಣೆಯಿಂದ ನಡೆಸುವ ಬಗ್ಗೆ ರೂಪು ರೇಷೆಗಳನ್ನು ವಿವರಿಸಿದರು. ಅಧ್ಯಕ್ಷರು ಉತ್ತಮ ರೀತಿಯಲ್ಲಿ ಬಳ್ಳಮಂಜ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವನ್ನು ಕೋರಿದರು. ಸಭೆಯಲ್ಲಿ ಈವರೆಗೆ ದೇಣಿಗೆ ನೀಡಿದ ದಾನಿಗಳ ಹೆಸರು ಖರ್ಚು ವೆಚ್ಚಗಳ ಮಾಹಿತಿಯನ್ನು ನೀಡಲಾಯಿತು. ಕ್ಷೇತ್ರದ ಸಿಬ್ಬಂದಿಗಳಾದ ಬಾಲಕೃಷ್ಣ ಬಿ ಸ್ವಾಗತಿಸಿ, ಸುಧೀರ್ ಶೆಟ್ಟಿ ಕೋರಬೆಟ್ಟು ಧನ್ಯವಾದವಿತ್ತರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya
error: Content is protected !!