22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು.

ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮ ಕಲಶದ ಪ್ರಯುಕ್ತ ದೇವಸ್ಥಾನದ ವತಿಯಿಂದ ರಚಿಸಿದ ಸಮಿತಿಯ ಸಭೆಯ ಅಧ್ಯಕ್ಷ ವಸಂತ ಗೌಡ ಮರಕಡ, ಗುತ್ತಿನ ಮನೆಯವರು ಊರ ಗಣ್ಯರು ಸಮಿತಿಯ ಸದಸ್ಯರು ಶ್ರಮದಾನ ಮಾಡಿದ ಶ್ರಮಿಕರು ಹಾಗೂ ದೇವಸ್ಥಾನದ ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆಯಿತು.

ಕ್ಷೇತ್ರದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಬ್ರಹ್ಮಕಲಶವನ್ನು ಮಾದರಿಯಾಗಿ ವಿಜೃಂಭಣೆಯಿಂದ ನಡೆಸುವ ಬಗ್ಗೆ ರೂಪು ರೇಷೆಗಳನ್ನು ವಿವರಿಸಿದರು. ಅಧ್ಯಕ್ಷರು ಉತ್ತಮ ರೀತಿಯಲ್ಲಿ ಬಳ್ಳಮಂಜ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವನ್ನು ಕೋರಿದರು. ಸಭೆಯಲ್ಲಿ ಈವರೆಗೆ ದೇಣಿಗೆ ನೀಡಿದ ದಾನಿಗಳ ಹೆಸರು ಖರ್ಚು ವೆಚ್ಚಗಳ ಮಾಹಿತಿಯನ್ನು ನೀಡಲಾಯಿತು. ಕ್ಷೇತ್ರದ ಸಿಬ್ಬಂದಿಗಳಾದ ಬಾಲಕೃಷ್ಣ ಬಿ ಸ್ವಾಗತಿಸಿ, ಸುಧೀರ್ ಶೆಟ್ಟಿ ಕೋರಬೆಟ್ಟು ಧನ್ಯವಾದವಿತ್ತರು.

Related posts

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya
error: Content is protected !!