25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

ಉಜಿರೆಯ ರೋಟರಿ ಭವನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನ್ಯೂನತೆ ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣಗೊಳಿಸುವ ಕುರಿತು ಫೆ.2ರಂದು ಸಭೆ ಜರುಗಿತು.

ಕಾಶಿಬೆಟ್ಟಿನ ಅರಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆ ಇರುವ ಸಂಪರ್ಕ ರಸ್ತೆಯನ್ನು ಪಾದಾಚಾರಿಗಳಿಗೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಬೇಕು.ಕಾಶಿಬೆಟ್ಟಿನಲ್ಲಿ ಬಸ್ ತಂಗುದಾಣ ಈಗಿನಂತೆ ಇರಬೇಕು. ಹೆದ್ದಾರಿಯಿಂದ ಅರಳಿಯ ಜಿಲ್ಲಾ ಪಂಚಾಯಿತಿ ರಸ್ತೆ ಸಂಪರ್ಕ ಮಾಡುವ ಸರ್ವಿಸ್ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸಬೇಕು ಎಂಬ ವಿಚಾರಗಳ ಕುರಿತು ಚರ್ಚಿಸಲಾಯಿತು.


ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜ,ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಸಂಸದ ಬ್ರಿಜೇಶ್ ಚೌಟ, ಕೇಂದ್ರ ಸಚಿವ ನಿತಿನ್ ಗಡ್ಕರಿ ಉಜಿರೆ ಹಾಗೂ ಲಾಯಿಲ ಗ್ರಾಪಂಗಳಿಗೆ ಮನವಿ ನೀಡುವ ಕುರಿತು ನಿರ್ಣಯಿಸಲಾಯಿತು.

ಸಮಸ್ಯೆಗೆ ಸೂಕ್ತ ಪರಿಹಾರ ದೊರಕದೆ ಇದ್ದರೆ, ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು, ಕಾನೂನು ಹೋರಾಟ ಮಾಡಲು ಅರಳಿಯ ನಿವಾಸಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸಹಕಾರ ನೀಡುವ ಬಗ್ಗೆ ಪ್ರಸ್ತಾಪಿಸಲಾಯಿತು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್, ಪೂರ್ವಾಧ್ಯಕ್ಷರಾದ ಮನೋರಮಾ ಭಟ್, ಶ್ರೀಕಾಂತ ಕಾಮತ್, ಜಯರಾಮ್, ಪಂಚಾಯಿತಿ ಸದಸ್ಯ ಜಗನ್ನಾಥ ರೈ, ಸ್ಥಳೀಯರಾದ ಶ್ರೀಕಾಂತ ಕಾಮತ್, ಸುರೇಶ್, ಮೋಹಿನಿ, ಭಾಗ್ಯಜ್ಯೋತಿ, ಪ್ರಮೀಳಾ, ಕೃಷ್ಣ, ವಿಜಯ, ಜಯಾನಂದ, ಗಿರೀಶ್, ರವಿಕುಮಾರ್, ವಿನಯ ಕೃಷ್ಣ,ಶಿಲ್ಪಾ, ಅಜಯ್, ಭಾಗೀರಥಿ, ಸುಧಾಕರ್, ಸೃಜನ್ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Related posts

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!