23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಹಾಗೂ ತೃಪ್ತಿ ಸಂಜೀವಿನಿ ಮಹಿಳಾ ಒಕ್ಕೂಟ, ಮತ್ತು ಗ್ರಾಮ ಪಂಚಾಯತ್, ನಾವೂರು ಇದರ ಸಹಯೋಗದಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮವನ್ನು ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಚಾಯತ್ ಅಧ್ಯಕ್ಷೆ ಸುನಂದಾ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಪುಷ್ಪ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೃಷಿಕ ಹಾಗೂ ತರಬೇತುದಾರ ಸುಲೈಮಾನ್ ಬೆಳಾಲು ಇವರು ಅಣಬೆ ಕೃಷಿ ,‌ ಮಲ್ಲಿಗೆ ಕೃಷಿ ಹಾಗೂ ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿತೆ ಮೂಲಕ ತರಬೇತಿ ನೀಡಿದರು.

ಸುಮಾರು 60 ಜನ ತರಬೇತಿಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು. ಗ್ರಾಮ ಪಂಚಾಯತ್ ಸದಸ್ಯರಾದ ಎನ್.ಕೆ ಹಸೈನಾರ್, ವೇದಾವತಿ, ಎಲ್.ಸಿ.ಆರ್. ಪಿ ಜಯಂತಿ, ಲೀಲಾವತಿ , ಪಶುಸಖಿ ತುಳಸಿ , ಕೃಷಿ ಸಖಿ ಶಕುಂತಲಾ, ತೃಪ್ತಿ, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಇದರ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಇಂದಿನ ಕಾರ್ಯಕ್ರಮದ ಮಹತ್ವ ಹಾಗೂ ಭವಿಷ್ಯದಲ್ಲಿ ಇಂತಹ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಚರ್ಚಿಸಿದರು. ಆರ್ಥಿಕ ಸಾಕ್ಷರತ ಕೇಂದ್ರದ ಉಷಾ ಕಾಮತ್ ಬ್ಯಾಂಕ್ ಅಕೌಂಟ್ ಎನ್.ಪಿಎಸ್ ಬಗ್ಗೆ ಮಾಹಿತಿ ನೀಡಿದರು. ಎಂ.ಬಿ.ಕೆ ಸೇವಿತಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!