July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಹಾಗೂ ತೃಪ್ತಿ ಸಂಜೀವಿನಿ ಮಹಿಳಾ ಒಕ್ಕೂಟ, ಮತ್ತು ಗ್ರಾಮ ಪಂಚಾಯತ್, ನಾವೂರು ಇದರ ಸಹಯೋಗದಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮವನ್ನು ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಚಾಯತ್ ಅಧ್ಯಕ್ಷೆ ಸುನಂದಾ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಪುಷ್ಪ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೃಷಿಕ ಹಾಗೂ ತರಬೇತುದಾರ ಸುಲೈಮಾನ್ ಬೆಳಾಲು ಇವರು ಅಣಬೆ ಕೃಷಿ ,‌ ಮಲ್ಲಿಗೆ ಕೃಷಿ ಹಾಗೂ ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿತೆ ಮೂಲಕ ತರಬೇತಿ ನೀಡಿದರು.

ಸುಮಾರು 60 ಜನ ತರಬೇತಿಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು. ಗ್ರಾಮ ಪಂಚಾಯತ್ ಸದಸ್ಯರಾದ ಎನ್.ಕೆ ಹಸೈನಾರ್, ವೇದಾವತಿ, ಎಲ್.ಸಿ.ಆರ್. ಪಿ ಜಯಂತಿ, ಲೀಲಾವತಿ , ಪಶುಸಖಿ ತುಳಸಿ , ಕೃಷಿ ಸಖಿ ಶಕುಂತಲಾ, ತೃಪ್ತಿ, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಇದರ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಇಂದಿನ ಕಾರ್ಯಕ್ರಮದ ಮಹತ್ವ ಹಾಗೂ ಭವಿಷ್ಯದಲ್ಲಿ ಇಂತಹ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಚರ್ಚಿಸಿದರು. ಆರ್ಥಿಕ ಸಾಕ್ಷರತ ಕೇಂದ್ರದ ಉಷಾ ಕಾಮತ್ ಬ್ಯಾಂಕ್ ಅಕೌಂಟ್ ಎನ್.ಪಿಎಸ್ ಬಗ್ಗೆ ಮಾಹಿತಿ ನೀಡಿದರು. ಎಂ.ಬಿ.ಕೆ ಸೇವಿತಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya
error: Content is protected !!