July 23, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಕಾರ್ಮಿಕ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಎಂಬಾತನಾಗುದ್ದಾನೆ.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ ಬೋರ್ ವೆಲ್ ಅನ್ನು ರಿಪೇರಿ ಮಾಡಿಸಲು ಫೆ.3 ರಂದು ಹಮೀದ್ ಎಂಬವರಿಗೆ ಸೇರಿದ ಬೋರ್ ವೆಲ್ ರಿಂಗ ವಾಹನವನ್ನು ಕರೆಸಿ ರಿಪೇರಿ ಮಾಡಿಸಿದಾಗ ಬೋರ್ ವೆಲ್ ಕೆಲಸ ಮುಗಿಸಿದ ಬಳಿಕ ಲಾರಿಯ ಡ್ರಿಲ್ ಮಾಡುವ ಯಂತ್ರವನ್ನು ಅದರ ಚಾಲಕ ಸಂಪತ್ ಕುಮಾರ್ ಎಂಬವರು ಸರಿಯಾದ ಜಾಗ್ರತೆ ವಹಿಸದೆ ನರ್ಲಕ್ಷ್ಯ ತನದಿಂದ ಕೆಳಗೆ ಇಳಿಸಿದ್ದು ಈ ವೇಳೆ ಇದು ವಿದ್ಯುತ್ ಲೈನಿಗೆ ತಾಗಿದೆ ಈ ಸಂದರ್ಭದಲ್ಲಿ ವಾಹನದ ಸಮೀಪ ನೀರಿನಲ್ಲಿ ನಿಂತಿದ್ದ ಕಾರ್ಮಿಕ ಶಿವ ಎಕ್ಕ ವಿದ್ಯುತ್ ಆಘಾತಕ್ಕೆ ಈಡಾಗಿ ಕೆಳಗೆ ಬಿದ್ದಿದ್ದು ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ ರಫೀಕ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ

Related posts

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!