23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಕಾರ್ಮಿಕ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಎಂಬಾತನಾಗುದ್ದಾನೆ.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ ಬೋರ್ ವೆಲ್ ಅನ್ನು ರಿಪೇರಿ ಮಾಡಿಸಲು ಫೆ.3 ರಂದು ಹಮೀದ್ ಎಂಬವರಿಗೆ ಸೇರಿದ ಬೋರ್ ವೆಲ್ ರಿಂಗ ವಾಹನವನ್ನು ಕರೆಸಿ ರಿಪೇರಿ ಮಾಡಿಸಿದಾಗ ಬೋರ್ ವೆಲ್ ಕೆಲಸ ಮುಗಿಸಿದ ಬಳಿಕ ಲಾರಿಯ ಡ್ರಿಲ್ ಮಾಡುವ ಯಂತ್ರವನ್ನು ಅದರ ಚಾಲಕ ಸಂಪತ್ ಕುಮಾರ್ ಎಂಬವರು ಸರಿಯಾದ ಜಾಗ್ರತೆ ವಹಿಸದೆ ನರ್ಲಕ್ಷ್ಯ ತನದಿಂದ ಕೆಳಗೆ ಇಳಿಸಿದ್ದು ಈ ವೇಳೆ ಇದು ವಿದ್ಯುತ್ ಲೈನಿಗೆ ತಾಗಿದೆ ಈ ಸಂದರ್ಭದಲ್ಲಿ ವಾಹನದ ಸಮೀಪ ನೀರಿನಲ್ಲಿ ನಿಂತಿದ್ದ ಕಾರ್ಮಿಕ ಶಿವ ಎಕ್ಕ ವಿದ್ಯುತ್ ಆಘಾತಕ್ಕೆ ಈಡಾಗಿ ಕೆಳಗೆ ಬಿದ್ದಿದ್ದು ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ ರಫೀಕ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ

Related posts

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya
error: Content is protected !!