July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಹಾಗೂ ತೃಪ್ತಿ ಸಂಜೀವಿನಿ ಮಹಿಳಾ ಒಕ್ಕೂಟ, ಮತ್ತು ಗ್ರಾಮ ಪಂಚಾಯತ್, ನಾವೂರು ಇದರ ಸಹಯೋಗದಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮವನ್ನು ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಚಾಯತ್ ಅಧ್ಯಕ್ಷೆ ಸುನಂದಾ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಪುಷ್ಪ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೃಷಿಕ ಹಾಗೂ ತರಬೇತುದಾರ ಸುಲೈಮಾನ್ ಬೆಳಾಲು ಇವರು ಅಣಬೆ ಕೃಷಿ ,‌ ಮಲ್ಲಿಗೆ ಕೃಷಿ ಹಾಗೂ ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿತೆ ಮೂಲಕ ತರಬೇತಿ ನೀಡಿದರು.

ಸುಮಾರು 60 ಜನ ತರಬೇತಿಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು. ಗ್ರಾಮ ಪಂಚಾಯತ್ ಸದಸ್ಯರಾದ ಎನ್.ಕೆ ಹಸೈನಾರ್, ವೇದಾವತಿ, ಎಲ್.ಸಿ.ಆರ್. ಪಿ ಜಯಂತಿ, ಲೀಲಾವತಿ , ಪಶುಸಖಿ ತುಳಸಿ , ಕೃಷಿ ಸಖಿ ಶಕುಂತಲಾ, ತೃಪ್ತಿ, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಇದರ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಇಂದಿನ ಕಾರ್ಯಕ್ರಮದ ಮಹತ್ವ ಹಾಗೂ ಭವಿಷ್ಯದಲ್ಲಿ ಇಂತಹ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಚರ್ಚಿಸಿದರು. ಆರ್ಥಿಕ ಸಾಕ್ಷರತ ಕೇಂದ್ರದ ಉಷಾ ಕಾಮತ್ ಬ್ಯಾಂಕ್ ಅಕೌಂಟ್ ಎನ್.ಪಿಎಸ್ ಬಗ್ಗೆ ಮಾಹಿತಿ ನೀಡಿದರು. ಎಂ.ಬಿ.ಕೆ ಸೇವಿತಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya
error: Content is protected !!