July 23, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಕಾರ್ಮಿಕ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಎಂಬಾತನಾಗುದ್ದಾನೆ.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ ಬೋರ್ ವೆಲ್ ಅನ್ನು ರಿಪೇರಿ ಮಾಡಿಸಲು ಫೆ.3 ರಂದು ಹಮೀದ್ ಎಂಬವರಿಗೆ ಸೇರಿದ ಬೋರ್ ವೆಲ್ ರಿಂಗ ವಾಹನವನ್ನು ಕರೆಸಿ ರಿಪೇರಿ ಮಾಡಿಸಿದಾಗ ಬೋರ್ ವೆಲ್ ಕೆಲಸ ಮುಗಿಸಿದ ಬಳಿಕ ಲಾರಿಯ ಡ್ರಿಲ್ ಮಾಡುವ ಯಂತ್ರವನ್ನು ಅದರ ಚಾಲಕ ಸಂಪತ್ ಕುಮಾರ್ ಎಂಬವರು ಸರಿಯಾದ ಜಾಗ್ರತೆ ವಹಿಸದೆ ನರ್ಲಕ್ಷ್ಯ ತನದಿಂದ ಕೆಳಗೆ ಇಳಿಸಿದ್ದು ಈ ವೇಳೆ ಇದು ವಿದ್ಯುತ್ ಲೈನಿಗೆ ತಾಗಿದೆ ಈ ಸಂದರ್ಭದಲ್ಲಿ ವಾಹನದ ಸಮೀಪ ನೀರಿನಲ್ಲಿ ನಿಂತಿದ್ದ ಕಾರ್ಮಿಕ ಶಿವ ಎಕ್ಕ ವಿದ್ಯುತ್ ಆಘಾತಕ್ಕೆ ಈಡಾಗಿ ಕೆಳಗೆ ಬಿದ್ದಿದ್ದು ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ ರಫೀಕ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya
error: Content is protected !!