25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

ಬೆಳ್ತಂಗಡಿ: ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್.ಕೆ ಅವರು ಫೆ.4 ರಂದು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದಂತೆ, ಮೃತ್ಯುವಿನ ಕಾರಣ ಮುಳುಗು ಆಗಿದೆ. ಆದರೆ ತಲೆಯಲ್ಲಿದ್ದ ಗಾಯದಿಂದ ಸಂಶಯ ಉಂಟಾದ ಕಾರಣ ಪ್ರಕರಣವನ್ನು ಸಂಪೂರ್ಣ ಹಾಗೂ ಸಮಗ್ರವಾಗಿ ತನಿಖೆ ನಡೆಸುವ ಉದ್ದೇಶದಿಂದ ಹತ್ಯೆ ಕಲಂನ್ನು ಸೇರಿಸಲಾಗಿದೆ.

ವೈದ್ಯಕೀಯ ನ್ಯಾಯವಿಜ್ಞಾನ ಹಾಗೂ ಅಂತಿಮ ಮರಣೋತ್ತರ ಪರೀಕ್ಷಾ ವರದಿ ಇನ್ನೂ ಬರಬೇಕಿದ್ದು, ಇದು ಹತ್ಯೆಯೇ ಅಥವಾ ಅಸಹಜ ಮರಣವೇ ಎಂಬುದರ ಬಗ್ಗೆ ಈವರೆಗೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ.ಈ ಮಧ್ಯೆ, ಕೆಲವರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಿದ್ದಾಂತಗಳನ್ನು ರೂಪಿಸಿ ಆರೋಪಿಗಳನ್ನು ಕುರಿತು ಊಹಾಪೋಹಗಳನ್ನು ಹರಡುತ್ತಿದ್ದಾರೆ. ತನಿಖೆ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸುವ ದಿಸೆಯಲ್ಲಿ ನಡೆಯುತ್ತಿದೆ; ಆದರೆ ವಿಚಾರಣೆಗೊಳಪಡಿಸಲಾದ ಪ್ರತಿಯೊಬ್ಬರೂ ಆರೋಪಿಗಳೇ ಎನ್ನುವುದಿಲ್ಲ.

ಈ ಪ್ರಕರಣದ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಲು ನಾಲ್ಕು ವಿಶೇಷ ತನಿಖಾ ತಂಡಗಳು ಕಾರ್ಯನಿರ್ವಹಿಸುತ್ತಿವೆ.ಇದಲ್ಲದೆ ಆಗಸ್ಟ್ 2025 ರ ಒಂದು ಅಸಹಜ ಮರಣ (UDR) ಪ್ರಕರಣವನ್ನು ಈ ಪ್ರಕರಣದೊಂದಿಗೆ ಸಂಪರ್ಕಿಸಲಾಗಿದೆ ಎಂದು ಗಮನಕ್ಕೆ ಬಂದಿದೆ. ಇದುವರೆಗೆ ಆ ಇನ್ನೊಂದು ಪ್ರಕರಣ ಹತ್ಯೆಯಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಲಭ್ಯವಿಲ್ಲ. ಯಾವುದೇ ಶಂಕಿತರ ಕುರಿತು ಹರಡಲಾಗುತ್ತಿರುವ ವಿವಿಧ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಮನವಿ ಮಾಡಲಾಗಿದೆ. ಇಂತಹ ವದಂತಿಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್. ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!