September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

ಬೆಳ್ತಂಗಡಿ : ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ವೃತ್ತಿಪರ ಕೋರ್ಸ್ ಗಳ ಬಗೆಗೆ ತಜ್ಞ ಉಪನ್ಯಾಸಕರಿಂದ ಮಾಹಿತಿ ಹಾಗೂ ಉಚಿತ ಸಮಾಲೋಚನಾ ಶಿಬಿರವನ್ನು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ಪರಿಚಯಿಸುತ್ತಿದೆ. ಈ ನೆಲೆಯಲ್ಲಿ ಫೆ.8 ರಂದು ಸಂಜೆ 4 ಗಂಟೆಗೆ ಗಣ್ಯ ಅತಿಥಿಗಳಿಂದ ಅದ್ದೂರಿ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಇದರ ಪೂರ್ವಭಾವಿಯಾಗಿ ಫೆ.3 ರಂದು ಕಾಲೇಜಿನ ಸಭಾಂಗಣದಲ್ಲಿ ಲೋಗೋ ಅನಾವರಣ ಕಾರ್ಯಕ್ರಮ ನೆರವೇರಿತು.

ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಲೋಗೋ ಅನಾವರಣಗೊಳಿಸಿ ಮಾತನಾಡಿ, ವಿದ್ವತ್ ಎಜುಕೇಶನ್ ಫೌಂಡೇಶನ್ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಎಂಬ ಕಾರ್ಯಕ್ರಮವನ್ನು ಜಿಲ್ಲೆಯಲ್ಲೆ ಪ್ಪ್ರಥಮವಾಗಿ ಪರಿಚಯಿಸುತ್ತಿದೆ. ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶ ನಮ್ಮದಾಗಿದೆ. ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ ಅವರ ಮುಂದಿರುವ ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ವೃತ್ತಿಪರ ಆಪ್ತ ಸಮಾಲೋಚನೆ ಅತ್ಯವಶ್ಯವಾಗಿದೆ. ಈ ದೃಷ್ಟಿಕೋನದಡಿ ಸಂಸ್ಥೆಯು “Walk-in to Vidvath” – A step into success” ಎಂಬ ಧ್ಯೇಯ ವಾಖ್ಯದೊಂದಿಗೆ ಕಾರ್ಯಕ್ರಮವನ್ನು ಪರಿಚಯಿಸುತ್ತಿದ್ದೇವೆ. ಈ ಸೇವೆಯು ಫೆಬ್ರವರಿ 8 ರಿಂದ ನಿರಂತರವಾಗಿ ಲಭ್ಯವಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರು ಇದರ ಸೇವೆಯನ್ನು ಪಡೆದುಕೊಳ್ಳಬಹುದು. ಇದು ಸಂಪೂರ್ಣ ಉಚಿತವಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಆಸಕ್ತರು ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.


ಈ ವೇಳೆ ವಿದ್ವತ್ ಪಿಯು ಕಾಲೇಜಿನ ಕಾರ್ಯದರ್ಶಿ ಪ್ರಜ್ವಲ್ ರೈ, ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಈ ಮಂಡಗಳಲೆ, ಆಡಳಿತಾಧಿಕಾರಿ ಅಶೋಕ್ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ.ಆರ್., ಪಿಆರ್ ಒ ಚೈತ್ರೇಶ್ ಸಿ ಮತ್ತು ಅಜಿತ್ ರೈ ಸಹಿತ ವಿವಿಧ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಮಡಂತ್ಯಾರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya
error: Content is protected !!