September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಹಾಗೂ ತೃಪ್ತಿ ಸಂಜೀವಿನಿ ಮಹಿಳಾ ಒಕ್ಕೂಟ, ಮತ್ತು ಗ್ರಾಮ ಪಂಚಾಯತ್, ನಾವೂರು ಇದರ ಸಹಯೋಗದಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮವನ್ನು ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಂಚಾಯತ್ ಅಧ್ಯಕ್ಷೆ ಸುನಂದಾ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಪುಷ್ಪ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೃಷಿಕ ಹಾಗೂ ತರಬೇತುದಾರ ಸುಲೈಮಾನ್ ಬೆಳಾಲು ಇವರು ಅಣಬೆ ಕೃಷಿ ,‌ ಮಲ್ಲಿಗೆ ಕೃಷಿ ಹಾಗೂ ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿತೆ ಮೂಲಕ ತರಬೇತಿ ನೀಡಿದರು.

ಸುಮಾರು 60 ಜನ ತರಬೇತಿಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು. ಗ್ರಾಮ ಪಂಚಾಯತ್ ಸದಸ್ಯರಾದ ಎನ್.ಕೆ ಹಸೈನಾರ್, ವೇದಾವತಿ, ಎಲ್.ಸಿ.ಆರ್. ಪಿ ಜಯಂತಿ, ಲೀಲಾವತಿ , ಪಶುಸಖಿ ತುಳಸಿ , ಕೃಷಿ ಸಖಿ ಶಕುಂತಲಾ, ತೃಪ್ತಿ, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಇನ್ಫೋಮೇಟ್ ಫೌಂಡೇಶನ್ ಕರ್ನಾಟಕ ಇದರ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಇಂದಿನ ಕಾರ್ಯಕ್ರಮದ ಮಹತ್ವ ಹಾಗೂ ಭವಿಷ್ಯದಲ್ಲಿ ಇಂತಹ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಚರ್ಚಿಸಿದರು. ಆರ್ಥಿಕ ಸಾಕ್ಷರತ ಕೇಂದ್ರದ ಉಷಾ ಕಾಮತ್ ಬ್ಯಾಂಕ್ ಅಕೌಂಟ್ ಎನ್.ಪಿಎಸ್ ಬಗ್ಗೆ ಮಾಹಿತಿ ನೀಡಿದರು. ಎಂ.ಬಿ.ಕೆ ಸೇವಿತಾ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya
error: Content is protected !!