September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿವರದಿ

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಅನ್ನು ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ಕಾರ್ಮಿಕ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಎಂಬಾತನಾಗುದ್ದಾನೆ.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ ಬೋರ್ ವೆಲ್ ಅನ್ನು ರಿಪೇರಿ ಮಾಡಿಸಲು ಫೆ.3 ರಂದು ಹಮೀದ್ ಎಂಬವರಿಗೆ ಸೇರಿದ ಬೋರ್ ವೆಲ್ ರಿಂಗ ವಾಹನವನ್ನು ಕರೆಸಿ ರಿಪೇರಿ ಮಾಡಿಸಿದಾಗ ಬೋರ್ ವೆಲ್ ಕೆಲಸ ಮುಗಿಸಿದ ಬಳಿಕ ಲಾರಿಯ ಡ್ರಿಲ್ ಮಾಡುವ ಯಂತ್ರವನ್ನು ಅದರ ಚಾಲಕ ಸಂಪತ್ ಕುಮಾರ್ ಎಂಬವರು ಸರಿಯಾದ ಜಾಗ್ರತೆ ವಹಿಸದೆ ನರ್ಲಕ್ಷ್ಯ ತನದಿಂದ ಕೆಳಗೆ ಇಳಿಸಿದ್ದು ಈ ವೇಳೆ ಇದು ವಿದ್ಯುತ್ ಲೈನಿಗೆ ತಾಗಿದೆ ಈ ಸಂದರ್ಭದಲ್ಲಿ ವಾಹನದ ಸಮೀಪ ನೀರಿನಲ್ಲಿ ನಿಂತಿದ್ದ ಕಾರ್ಮಿಕ ಶಿವ ಎಕ್ಕ ವಿದ್ಯುತ್ ಆಘಾತಕ್ಕೆ ಈಡಾಗಿ ಕೆಳಗೆ ಬಿದ್ದಿದ್ದು ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ ರಫೀಕ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ

Related posts

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya
error: Content is protected !!