30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

ಪುದುವೆಟ್ಟು: ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನ ಮಿಯ್ಯಾರು ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುದುವೆಟ್ಟು ವಿಭಾಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಫೆ.7 ಹಾಗೂ 8 ರಂದು ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ ಜರುಗಲಿರುವುದು.

ಫೆ.7ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಹಾಮಂಗಳಾರತಿ, ಮಧ್ಯಾಹ್ನ ಶ್ರೀ ವನದುರ್ಗಾ ದೇವಿಯ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಹಿಪ್-ಬಾಯ್ಸ್ ನೃತ್ಯ ತಂಡ ಉಜಿರೆ ಇವರಿಂದ ನೃತ್ಯ ಕಾರ್ಯಕ್ರಮ, ಅಪ್ಪೆ ಬ್ರಾಹ್ಮರಿ, ರಾತ್ರಿ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ಜರುಗುವುದು.
ಫೆ.೮ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಪುದುವೆಟ್ಟು ಗ್ರಾಮದ ಪ್ರತಿಭಾನ್ವಿತರಿಂದ ಸಾಂಸ್ಕೃತಿಕ ವೈವಿಧ್ಯ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಭಜನಾ ಕಮ್ಮಟೋತ್ಸವ ಜರುಗುವುದು.

ಧಾರ್ಮಿಕ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ, ಧಾರ್ಮಿಕ ಪ್ರವಚನವನ್ನು ಲಕ್ಷ್ಮೀಶ ಭಟ್ ಗಬಲಡ್ಕ ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಶ್ರೀ ಸೌತಡ್ಕ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಹರೀಶ್ ಇಂಜಾಡಿ, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸ್ವರ್ಣ ಗೌರಿ, ಅಧ್ಯಕ್ಷರು ಸೇವಾ ಭಾರತಿ ಬೆಳ್ತಂಗಡಿ, ನಾಗೇಶ್ ಕುಮಾರ್ ಗೌಡ, ಸ್ವಾಮಿ ಪ್ರಸಾದ್ ಕನ್‌ಸ್ಟçಕ್ಷನ್ಸ್, ಲಾಯಿಲ ಭಾಗವಹಿಸಲಿರುವರು.

Related posts

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಪೆರೋಡಿತ್ತಾಯಕಟ್ಟೆ: ಭಾರಿ ಗಾಳಿ ಮಳೆಗೆ ಮನೆಗೆ ಹಾನಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya
error: Content is protected !!