July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಮೊದಲ್ಗೊಂಡು ಫೆ.12 ರವರೆಗೆ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ಗಣೇಶ್ ಕಾಂತಾಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಫೆ.8 ರಂದು ಬೆಳಿಗ್ಗೆ ಶ್ರೀ ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನಪೂಜೆ ಸಂಜೆ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರಿಂದ ಲಂಕಾದಹನ ಯಕ್ಷಗಾನ, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ನಿತ್ಯ ಬಲಿ ಜರುಗಲಿದೆ. ಫೆ.10ರಂದು ಬೆಳಿಗ್ಗೆ ಕವಾಟ ಉದ್ಘಾಟನಾ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ಸಂಜೆ ಕಳೆಂಜ ಮೂಲಸ್ಥಾನದಿಂದ ಭಂಡಾರದ ಆಗಮನ, ರಾತ್ರಿ ಸ.ಉ.ಹಿ.ಪ್ರಾ.ಶಾಲೆ ಕೊಯ್ಯೂರು ಇಲ್ಲಿಯ ವಿದ್ಯಾರ್ಥಿಗಳಿಂದ ‘ನೃತ್ಯ ವೈವಿಧ್ಯ’, ಶ್ರೀ ದೇವಿಯ ಉತ್ಸವ, ಕೆರೆಕಟ್ಟೆ ಪೂಜೆ, ಅವಭೃತ, ಧ್ವಜಾವರೋಹಣ, ಪ್ರಸನ್ನ ಪೂಜೆ, ಶ್ರೀ ಧರ್ಮದೈವಗಳ ನೇಮೋತ್ಸವ ಶ್ರೀ ಧರ್ಮದೈವ ವಾರಾಹಿ, ಶ್ರೀ ಧೂಮಾವತಿ ನೇಮೋತ್ಸವ, ಶ್ರೀ ಕೊಡಮಣಿತ್ತಾಯ ಸಹಿತ ಧರ್ಮದೈವಗಳ ನೇಮೋತ್ಸವ ಜರುಗುವುದು.

ಫೆ.9ರಂದು ಬೆಳಿಗ್ಗೆ ಶ್ರೀದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ರಾಮ ಭಜನಾ ಮಂಡಳಿ ಮಲೆಬೆಟ್ಟು-ಇವರ ನೇತೃತ್ವದಲ್ಲಿ ಆಹ್ವಾನಿತ ಭಜನಾ ಮಂಡಳಿಗಳಿಂದ ‘ಕಮ್ಮಟ ಭಜನೋತ್ಸವ’, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಲಿದೆ.

ಫೆ.11ರಂದು ಬೆಳಿಗ್ಗೆ ಶ್ರೀ ಭಂಡಾರದ ನಿರ್ಗಮನ, ಸಂಪ್ರೋಕ್ಷಣೆ, ಪ್ರಸನ್ನ ಪೂಜೆ, ರಾತ್ರಿ ಮೂಲಸ್ಥಾನ ಕಳೆಂಜ ಗುತ್ತು ದೈವಸ್ಥಾನದಲ್ಲಿ ಧರ್ಮದೈವ ವಾರಾಹಿ ನೇಮೋತ್ಸವ, ಕಲ್ಕುಡ, ಕಲ್ಲುರ್ಟಿ, ಗುಳಿಗೆ ನೇಮೋತ್ಸವ ಜರುಗುವುದು. ಫೆ.೧೨ರಂದು ಬೆಳಿಗ್ಗೆ ಶ್ರೀ ಕಲಶಾಭಿಷೇಕ – ಕಳೆಂಜದಲ್ಲಿ, ಪ್ರಸನ್ನಪೂಜೆ ಮಧ್ಯಾಹ್ನ ಸಂಕ್ರಮಣ ಪೂಜೆ, ಅನ್ನಸಂತರ್ಪಣೆ ಜರುಗಲಿರುವುದು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya
error: Content is protected !!