23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

ಮರೋಡಿ: ಪುರುಷ ಸಮಾಜದಲ್ಲಿ ಹೆಣ್ಣೊಬ್ಬಳು ತನ್ನ ಹಕ್ಕುಗಳಿಗಾಗಿ ಬಂಡಾಯದ ಪ್ರತಿರೂಪವಾಗಿ ಹುಟ್ಟಿಕೊಂಡ ಸಿರಿ ಆರಾಧನೆಗೆ ತುಳುನಾಡಿನಲ್ಲಿ ವಿಶೇಷ ಸ್ಥಾನಮಾನವಿದೆ. ಇದು ಪರಶುರಾಮ ಸೃಷ್ಟಿಯ ನಮ್ಮ ನೆಲದ ಶ್ರೀಮಂತ ಸಂಸ್ಕೃತಿಗಳಲ್ಲಿ ಒಂದು ಎಂದು ಖ್ಯಾತ ವಾಗ್ಮಿ ಶ್ರೀಕಾಂತ್‌ ಶೆಟ್ಟಿ ಅಭಿಪ್ರಾಯಪಟ್ಟರು.

ಆಲಡೆ ಕ್ಷೇತ್ರ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಪ್ರಯುಕ್ತ ಫೆ.4ರಂದು ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಪ್ರವಚನ ನೀಡಿದರು.

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಮತ್ತು ಆಲಡೆ ಕ್ಷೇತ್ರಗಳ ನಡುವೆ ಅವಿನಾಭಾವ ಸಂಬಂಧವಿದೆ. ಆಲಡೆಯ ಸಾನ್ನಿಧ್ಯ ಶಕ್ತಿಗಳ ಅನುಗ್ರಹವಿದ್ದರೆ ಜೀವನ ಪಾವನವಾಗುತ್ತದೆ ಎಂಬ ನಂಬಿಕೆಯಿದೆ. ಈ ಆಲಡೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಯುವಪೀಳಿಗೆಯಿಂದ ನಡೆಯಬೇಕು ಎಂದು ಹೇಳಿದರು.

ಇಂದು ಆಲಡೆ ಕ್ಷೇತ್ರಗಳು ನಶಿಸಿ ಹೋಗುತ್ತಿವೆ. ಅವು ಕೇವಲ ದೇವಸ್ಥಾನವಾಗಿ ಬದಲಾಗುತ್ತಿವೆ. ಬಹುತೇಕ ಕಡೆಗಳಲ್ಲಿ ದಲ್ಯ ನಿಲ್ಲುವ ಕ್ರಮವೇ ನಿಂತು ಹೋಗಿದೆ. ಸುಶಿಕ್ಷಿತರು ಹೆಚ್ಚಾದಂತೆ ತುಳುನಾಡಿನ ದೈವಾರಾಧನೆಯ ರಂಗದಲ್ಲಿ ಇಂತಹ ವಿಪತ್ತು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ, ಮರೋಡಿ ಕ್ಷೇತ್ರದಲ್ಲಿ ಈ ಎಲ್ಲಾ ಆಚರಣೆಗಳು ಶಿಸ್ತುಬದ್ಧವಾಗಿ ನಡೆಯುತ್ತಿರುವುದು ಶ್ಲಾಘನೀಯವಾದುದು. ಈ ಆಚರಣೆಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅದನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌, ಜೀರ್ಣೋದ್ಧಾರ ಸಮಿತಿ ಮುಂಬೈ ಘಟಕದ ಅಧ್ಯಕ್ಷ ನಾರಾಯಣ ಸುವರ್ಣ ಉಪಸ್ಥಿತರಿದ್ದರು. ಯಶೋಧರ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಗೇರುಕಟ್ಟೆ: ಶ್ರೀ ಪಾರ್ಶ್ವನಾಥ ಫ್ಯೂಯಲ್ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!