30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73 ರ ಮುಂಡಾಜೆ ಗ್ರಾಮದ ಸೀಟ್ ರಕ್ಷಿತಾರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಂದು ಸುರಿಯಲಾಗುತ್ತಿದೆ.

ರಸ್ತೆ ಬದಿಯ ಚರಂಡಿಯಲ್ಲಿ ರಾಶಿರಾಶಿ ಪ್ಲಾಸ್ಟಿಕ್ ತ್ಯಾಜ್ಯಗಳು ಕಂಡು ಬರುತ್ತಿವೆ. ಕೆಲವೊಂದು ಕಡೆಗಳಲ್ಲಿ ಗೋಣಿಯಲ್ಲಿ ಕಟ್ಟಿ ಹಾಕಿದ ತ್ಯಾಜ್ಯಗಳು ಕಂಡು ಬರುತ್ತಿವೆ. ಹೀಗೆಯೇ ಮುಂದುವರಿದರೆ ಮೀಸಲು ಅರಣ್ಯ ತ್ಯಾಜ್ಯ ಡಂಪಿಂಗ್ ಯಾರ್ಡ್ ಆಗಿ ಬದಲಾಗುವುದು ನಿಶ್ಚಿತ.

ರಸ್ತೆ ಬದಿಯ ಅಲ್ಲಲ್ಲಿ ತ್ಯಾಜ್ಯ ರಾಶಿಗಳು ಕಂಡು ಬರುತ್ತಿವೆ. ಮಕ್ಕಳ ಸ್ಯಾನಿಟರಿ ಪ್ಯಾಡ್, ಗೃಹ ಬಳಕೆಯ ತ್ಯಾಜ್ಯಗಳು, ನೀರಿನ ಬಾಟಲ್, ತಲೆದಿಂಬುಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಈ ರಕ್ಷಿತಾರಣ್ಯ ಪ್ರದೇಶದಲ್ಲಿ ತಂದು ಸುರಿಯುತ್ತಿದ್ದಾರೆ. ಇದು ಮೀಸಲು ರಕ್ಷಿತಾರಣ್ಯ ಪ್ರದೇಶವಾಗಿದ್ದು, ಯಾವುದೇ ಇಲ್ಲಿ ತ್ಯಾಜ್ಯಗಳನ್ನು ತಂದು ಸುರಿಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಇದನ್ನು ತೆರವುಗೊಳಿಸಿ ರಕ್ಷಿತಾರಣ್ಯ ಪ್ರದೇಶವನ್ನು ಸಂರಕ್ಷಿಸಬೇಕಾಗಿದೆ.

ಅರಣ್ಯದ ಮಧ್ಯೆ ರಸ್ತೆ ಹಾದು ಹೋಗುವುದರಿಂದ ಸಾಕಷ್ಟುನೆರಳು ಹಾಗೂ ತಂಪಾದ ವಾತವರಣವಿದ್ದು, ಹೀಗಾಗಿ ಪ್ರವಾಸಿಗರು ಇಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಆಹಾರ ಸೇವನೆಯನ್ನು ಕೂಡಾ ಮಾಡುತ್ತಾರೆ. ಹೀಗಾಗಿಯೇ ಈ ಪ್ರದೇಶದ ಅಲ್ಲಲ್ಲಿ ಆಹಾರ ಪೊಟ್ಟಣಗಳು ಕೂಡಾ ರಾಶಿ ಬಿದ್ದಿವೆ. ಅಲ್ಲದೆ ಕೆಲವು ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿ ಮದ್ಯಪಾನ, ಧೂಮಪಾನ ಮಾಡುತ್ತಾ ರೆಂಬ ಆರೋಪವೂ ಇದೆ. ಧೂಮಪಾನದ ಕಿಡಿಯಿಂದ ಬೆಂಕಿ ಹತ್ತಿಕೊಂಡರೆ ಸಂಪೂರ್ಣ ಅರಣ್ಯ ಬೆಂಕಿಗೆ ಆಹುತಿಯಾಗಬಹುದು.

ಕೆಲವು ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿ, ಕಾಡಿನೊಳಗೆ ತೆರಳಿ ವಿರಾಮ ಪಡೆಯುತ್ತಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಇದು ಹೀಗೆಯೇ ಮುಂದು ವರಿದರೆ ಅನೈತಿಕ ಚಟುವಟಿಕೆಗಳೂ ನಡೆ ಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಅಂಗಡಿಗಳ ಸಂಖ್ಯೆಯಲ್ಲಿ ಹೆಚ್ಚಳ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ -73 ರ ಮುಂಡಾಜೆ ಗ್ರಾಮದ ಸೀಟ್ ರಕ್ಷಿತಾರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಕೆಲವೊಂದು ಅಂಗಡಿಗಳು ಕೂಡಾ ಕಾರ್ಯಾಚರಿಸುತ್ತಿವೆ. ಇದು `ಪ್ಲಾಸ್ಟಿಕ್ ಕವರ್‌ನಲ್ಲಿ ಸಿದ್ದವಾಗಿರುವ ತಿಂಡಿ ತಿನಿಸುಗಳನ್ನೂ ಮಾರಾಟ ಮಾಡುತ್ತಿದ್ದು ಪ್ಲಾಸ್ಟಿಕ್ ತ್ಯಾಜ್ಯ ರಾಶಿ ಹೆಚ್ಚಳಕ್ಕೆ ಕಾರಣವಾಗಬಹುದು.

Related posts

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!