25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅತ್ತಿದಡಿ ನಿವಾಸಿ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿಎಸ್‌ಸಿ- 1(ಪೊಕ್ಸೊ) ನ್ಯಾಯಾಲಯವು ಫೆ.3 ರಂದು ವಿವಿಧ ಸೆಕ್ಷನ್ ಅಡಿಯಲ್ಲಿ 8 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

2025ರ ಮಾರ್ಚ್‌ 25 ರಂದು ಶಂಕರಗೌಡ(60) ತನಗೆ ಪರಿಚಯವಿದ್ದ ಬಾಲಕಿಯ ಮನೆಗೆ ತೆರಳಿ ಅಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ 1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಮೋಹನ ಜೆ.ಎಸ್‌. ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.
ಬಿಎನ್‌ಎಸ್ ಕಲಂ 74ರಡಿ 3 ವರ್ಷದ ಕಠಿಣ ಶಿಕ್ಷೆ ಮತ್ತು 20,000 ರೂ.ದಂಡ, ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಶಿಕ್ಷೆ ಬಿಎನ್ ಎಸ್ ಕಲಂ 75 (2)ರಡಿ 2 ವರ್ಷ ಕಠಿಣ ಶಿಕ್ಷೆ ಮತ್ತು 15,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 4 ತಿಂಗಳು ಸಾದಾ ಸಜೆ, ಪೊಕ್ಸೊ ಕಾಯ್ದೆಯ ಕಲಂ 8 ರಡಿ 3 ವರ್ಷ ಕಠಿಣ ಶಿಕ್ಷೆ ಮತ್ತು 20,000 ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿದ್ದಾರೆ. ಈ ಶಿಕ್ಷೆಗಳನ್ನು ಜತೆಯಾಗಿ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.

2 ಲಕ್ಷ ರೂ. ಪರಿಹಾರ: ದಂಡದ ಮೊತ್ತದಲ್ಲಿ 50,000 ರೂ. ಅಲ್ಲದೆ, 1.50 ಲಕ್ಷ ರೂ. ಹೆಚ್ಚುವರಿ ಪರಿಹಾರವನ್ನು ಸಂತ್ರಸ್ತ ಬಾಲಕಿಗೆ ನೀಡಬೇಕು ಎಂದು ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ತನಿಖಾಧಿಕಾರಿ) ಸಮರ್ಥ್ ಆರ್ ಗಾಣಿಗೇರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಪ್ರಮೋದಿನಿ ಹಾಗೂ ಕೋರ್ಟ್ ಬೀಟ್ ಮೇಹಬೂಬ್ ಪಾಟೇಲ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನ ಸಹಕರಿಸಿದ್ದರು. ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ಹಾರೆ.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya
error: Content is protected !!