23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿವರದಿ

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ದಿ. ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖವನ್ನು ಹೊಂದಿರುತ್ತಾರೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾರೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬೇಕೆಂದು ಠಾಣಾಧಿಕಾರಿ ಸುತೇಶ್ ಎಸ್. ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Related posts

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya
error: Content is protected !!