
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ಹತ್ಯಡ್ಕ ಗ್ರಾಮದ ಮೂಕಾಂಬಿಕಾಗಿರಿಯ ಜಯಶ್ರೀ ರವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಮನೆಯನ್ನು ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರು ಹಸ್ತಾಂತರಿಸಿ ವಾತ್ಸಲ್ಯ ಕಿಟ್ ವಿತರಣೆ ಮಾಡಿ ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ ನಮ್ಮ ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಕೊನೆ ಕಾಲಕ್ಕೆ ನಮಗೆ ಅಸರೆಯಾಗುತ್ತಾರೆ ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕ ದಿನೇಶ್ ಡಿ, ತಾಲೂಕು ಯೋಜನಾಧಿಕಾರಿ ಯಶೋಧರ, ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಯವರಾದ ಹರೀಶ್ ಕೃಷ್ಣ, ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕ ಜಯರಾಮ್ , ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್, ಊರಿನ ಗಣ್ಯರಾದ ಸುಧೀರ್ , ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಧರ್ಮರಾಜ್ ಅಡ್ಕಾಡಿ, ತಾ.ಪಂ. ಮಾಜಿ ಸದಸ್ಯೆ ಮಂಜುಳಾ ಕಾರಂತ್, ಚೆನ್ನಪ್ಪ ಗೌಡ, ಸತೀಶ್ ಶೆಟ್ಟಿ, ರೆಖ್ಯ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಶಿವರಾಮ ಗೌಡ, ಶಿಶಿಲ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪಗೌಡ ಜಿ., ಅರಸಿನಮಕ್ಕಿ ವಲಯ ಮೇಲ್ವಿಚಾರಕಿ ಶಶಿಕಲಾ, ಶೌರ್ಯ ವಿಪತ್ತು ಶಿಶಿಲ, ಅರಸಿನಮ್ಕಕಿ ಸದಸ್ಯರು, ಅರಸಿನಮಕ್ಕಿ ವಿಭಾಗದ ಸೇವಾಪ್ರತಿನಿಧಿ, ಜನಜಾಗೃತಿ ತಾಲೂಕು ವೇದಿಕೆ ಸದಸ್ಯರು, ಒಕ್ಕೂಟ ಸದಸ್ಯರು, ಸ್ಥಳೀಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.











