ನಡ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.5ರಂದು ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಸಮಾಜ ಭವನದಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ, ಸದಸ್ಯರಾದ ಎನ್.ಬಿ. ಹರಿಶ್ಚಂದ್ರ, ಎ ವಿಜಯ ಗೌಡ, ಸುಕೇಶ್, ಪ್ರವೀಣ್ ವಿ.ಜೆ., ಜಯ ಶೆಟ್ಟಿ, ಲಲಿತ, ಸುಶೀಲ, ಸುಮಿತ್ರ, ಶಶಿಕಲಾ, ವಿನುತಾ, ಮಮತಾ, ಚಂದ್ರಹಾಸ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಕಿರಣ್ ಅನುಪಾಲನ ವರದಿ ವಾಚಿಸಿ, ಸಿಬ್ಬಂದಿ ಭಾರತಿ ಜಮಾಖರ್ಚು ಮಂಡಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಕೆ. ಸ್ವಾಗತಿಸಿದರು. ಸಿಬ್ಬಂದಿ ಮೀನಾಕ್ಷಿ ನಿರೂಪಿಸಿದರು.











