22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಮೊದಲ್ಗೊಂಡು ಫೆ.12 ರವರೆಗೆ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ಗಣೇಶ್ ಕಾಂತಾಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಫೆ.8 ರಂದು ಬೆಳಿಗ್ಗೆ ಶ್ರೀ ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನಪೂಜೆ ಸಂಜೆ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರಿಂದ ಲಂಕಾದಹನ ಯಕ್ಷಗಾನ, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ನಿತ್ಯ ಬಲಿ ಜರುಗಲಿದೆ. ಫೆ.10ರಂದು ಬೆಳಿಗ್ಗೆ ಕವಾಟ ಉದ್ಘಾಟನಾ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ಸಂಜೆ ಕಳೆಂಜ ಮೂಲಸ್ಥಾನದಿಂದ ಭಂಡಾರದ ಆಗಮನ, ರಾತ್ರಿ ಸ.ಉ.ಹಿ.ಪ್ರಾ.ಶಾಲೆ ಕೊಯ್ಯೂರು ಇಲ್ಲಿಯ ವಿದ್ಯಾರ್ಥಿಗಳಿಂದ ‘ನೃತ್ಯ ವೈವಿಧ್ಯ’, ಶ್ರೀ ದೇವಿಯ ಉತ್ಸವ, ಕೆರೆಕಟ್ಟೆ ಪೂಜೆ, ಅವಭೃತ, ಧ್ವಜಾವರೋಹಣ, ಪ್ರಸನ್ನ ಪೂಜೆ, ಶ್ರೀ ಧರ್ಮದೈವಗಳ ನೇಮೋತ್ಸವ ಶ್ರೀ ಧರ್ಮದೈವ ವಾರಾಹಿ, ಶ್ರೀ ಧೂಮಾವತಿ ನೇಮೋತ್ಸವ, ಶ್ರೀ ಕೊಡಮಣಿತ್ತಾಯ ಸಹಿತ ಧರ್ಮದೈವಗಳ ನೇಮೋತ್ಸವ ಜರುಗುವುದು.

ಫೆ.9ರಂದು ಬೆಳಿಗ್ಗೆ ಶ್ರೀದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ರಾಮ ಭಜನಾ ಮಂಡಳಿ ಮಲೆಬೆಟ್ಟು-ಇವರ ನೇತೃತ್ವದಲ್ಲಿ ಆಹ್ವಾನಿತ ಭಜನಾ ಮಂಡಳಿಗಳಿಂದ ‘ಕಮ್ಮಟ ಭಜನೋತ್ಸವ’, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಲಿದೆ.

ಫೆ.11ರಂದು ಬೆಳಿಗ್ಗೆ ಶ್ರೀ ಭಂಡಾರದ ನಿರ್ಗಮನ, ಸಂಪ್ರೋಕ್ಷಣೆ, ಪ್ರಸನ್ನ ಪೂಜೆ, ರಾತ್ರಿ ಮೂಲಸ್ಥಾನ ಕಳೆಂಜ ಗುತ್ತು ದೈವಸ್ಥಾನದಲ್ಲಿ ಧರ್ಮದೈವ ವಾರಾಹಿ ನೇಮೋತ್ಸವ, ಕಲ್ಕುಡ, ಕಲ್ಲುರ್ಟಿ, ಗುಳಿಗೆ ನೇಮೋತ್ಸವ ಜರುಗುವುದು. ಫೆ.೧೨ರಂದು ಬೆಳಿಗ್ಗೆ ಶ್ರೀ ಕಲಶಾಭಿಷೇಕ – ಕಳೆಂಜದಲ್ಲಿ, ಪ್ರಸನ್ನಪೂಜೆ ಮಧ್ಯಾಹ್ನ ಸಂಕ್ರಮಣ ಪೂಜೆ, ಅನ್ನಸಂತರ್ಪಣೆ ಜರುಗಲಿರುವುದು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!