22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಮೊದಲ್ಗೊಂಡು ಫೆ.12 ರವರೆಗೆ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ಗಣೇಶ್ ಕಾಂತಾಜೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಫೆ.8 ರಂದು ಬೆಳಿಗ್ಗೆ ಶ್ರೀ ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನಪೂಜೆ ಸಂಜೆ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರಿಂದ ಲಂಕಾದಹನ ಯಕ್ಷಗಾನ, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ನಿತ್ಯ ಬಲಿ ಜರುಗಲಿದೆ. ಫೆ.10ರಂದು ಬೆಳಿಗ್ಗೆ ಕವಾಟ ಉದ್ಘಾಟನಾ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ಸಂಜೆ ಕಳೆಂಜ ಮೂಲಸ್ಥಾನದಿಂದ ಭಂಡಾರದ ಆಗಮನ, ರಾತ್ರಿ ಸ.ಉ.ಹಿ.ಪ್ರಾ.ಶಾಲೆ ಕೊಯ್ಯೂರು ಇಲ್ಲಿಯ ವಿದ್ಯಾರ್ಥಿಗಳಿಂದ ‘ನೃತ್ಯ ವೈವಿಧ್ಯ’, ಶ್ರೀ ದೇವಿಯ ಉತ್ಸವ, ಕೆರೆಕಟ್ಟೆ ಪೂಜೆ, ಅವಭೃತ, ಧ್ವಜಾವರೋಹಣ, ಪ್ರಸನ್ನ ಪೂಜೆ, ಶ್ರೀ ಧರ್ಮದೈವಗಳ ನೇಮೋತ್ಸವ ಶ್ರೀ ಧರ್ಮದೈವ ವಾರಾಹಿ, ಶ್ರೀ ಧೂಮಾವತಿ ನೇಮೋತ್ಸವ, ಶ್ರೀ ಕೊಡಮಣಿತ್ತಾಯ ಸಹಿತ ಧರ್ಮದೈವಗಳ ನೇಮೋತ್ಸವ ಜರುಗುವುದು.

ಫೆ.9ರಂದು ಬೆಳಿಗ್ಗೆ ಶ್ರೀದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ರಾಮ ಭಜನಾ ಮಂಡಳಿ ಮಲೆಬೆಟ್ಟು-ಇವರ ನೇತೃತ್ವದಲ್ಲಿ ಆಹ್ವಾನಿತ ಭಜನಾ ಮಂಡಳಿಗಳಿಂದ ‘ಕಮ್ಮಟ ಭಜನೋತ್ಸವ’, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಲಿದೆ.

ಫೆ.11ರಂದು ಬೆಳಿಗ್ಗೆ ಶ್ರೀ ಭಂಡಾರದ ನಿರ್ಗಮನ, ಸಂಪ್ರೋಕ್ಷಣೆ, ಪ್ರಸನ್ನ ಪೂಜೆ, ರಾತ್ರಿ ಮೂಲಸ್ಥಾನ ಕಳೆಂಜ ಗುತ್ತು ದೈವಸ್ಥಾನದಲ್ಲಿ ಧರ್ಮದೈವ ವಾರಾಹಿ ನೇಮೋತ್ಸವ, ಕಲ್ಕುಡ, ಕಲ್ಲುರ್ಟಿ, ಗುಳಿಗೆ ನೇಮೋತ್ಸವ ಜರುಗುವುದು. ಫೆ.೧೨ರಂದು ಬೆಳಿಗ್ಗೆ ಶ್ರೀ ಕಲಶಾಭಿಷೇಕ – ಕಳೆಂಜದಲ್ಲಿ, ಪ್ರಸನ್ನಪೂಜೆ ಮಧ್ಯಾಹ್ನ ಸಂಕ್ರಮಣ ಪೂಜೆ, ಅನ್ನಸಂತರ್ಪಣೆ ಜರುಗಲಿರುವುದು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya
error: Content is protected !!