23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಪುದುವೆಟ್ಟು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾ.1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪುದುವೆಟ್ಟು ವಿನ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.01 ರಂದು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ( SNDP) ಪುದುವೆಟ್ಟು ಇಲ್ಲಿ ನಡೆಯಿತು. ಸಂಘ ದ ಅಧ್ಯಕ್ಷ ಸುರೇಶ್ ಕೇರಿಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಪುದುವೆಟ್ಟು ಇದರ ಉಪಾಧ್ಯಕ್ಷ ಅಶೋಕನ್ ಎಂ ಟಿ, ಎಸ್ ಎನ್ ಡಿ ಪಿ ಇದರ ಗೆಜ್ಜೆ ಗಿರಿ ಸಮಿತಿಯ ಅಧ್ಯಕ್ಷ ಗೋಪಿ ದಾಸ್ ಬಾರಳಿ, ಕಾರ್ಯದರ್ಶಿಯಾದ ಅನುಶ್ರೀ, ಮಾಜಿ ಅಧ್ಯಕ್ಷ ಸುಕುಮಾರನ್ ಪಿ, ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ಪುದುವೆಟ್ಟು ಇದರ ಪ್ರಧಾನ ಕಾರ್ಯದರ್ಶಿ ಬಿಜು ಪೂಜಾರಿ ಉಪಸ್ಥಿತರಿದ್ದರು. ಮಹೇಶ್ ಕೆ ಎಂ, ಮನೋಜ್ ಏರಳಿಕೆ, ಪುಷ್ಪಕರನ್,ಗಿರಿಜಾ ಶಿವನ್, ದಿವಿನೇಶ್, ಕೆ ಪಿ ನಾರಾಯಣ, ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರೂ, ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಇದರ ವಲಯ ಸಂಚಾಲಕರಾಗಿರುವ ಸಂತೋಷ್ ಕೆ ಸಿ ಪುದುವೆಟ್ಟು ಕಾರ್ಯಕ್ರಮವನ್ನು ಸಂಯೋಜಿಸಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ : ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!