September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

ಧರ್ಮಸ್ಥಳ ಗ್ರಾಮದಲ್ಲಿರುವ ಶ್ರೀರಾಮ ಕ್ಷೇತ್ರವು ದಕ್ಷಿಣ ಭಾರತದ ಅಯೋಧ್ಯೆ ಎಂದೇ ಪ್ರಸಿದ್ಧವಾಗಿರುತ್ತದೆ. ಶ್ರೀ ಕ್ಷೇತ್ರದಲ್ಲಿರುವ ರಾಮಮಂದಿರವು ಮೂರು ಅಂತಸ್ತಿನಿಂದ ನಿರ್ಮಾಣಗೊಂಡಿದ್ದು ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಎರಡು ಶೈಲಿಗಳನ್ನು ಬಳಸಿ ನಿರ್ಮಾಣಗೊಂಡಿರುತ್ತದೆ.

ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಒಟ್ಟು ಎಂಟು ಸ್ಥಳಗಳಲ್ಲಿ ಶಾಖಾ ಮಠಗಳನ್ನು ಹೊಂದಿರುವ ಶ್ರೀ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರದ ಟ್ರಸ್ಟಿಯನ್ನಾಗಿ ಬೆಳ್ತಂಗಡಿಯ ನಿವಾಸಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ, ಧಾರ್ಮಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಸೇವೆಗೈಯ್ಯುತ್ತಿರುವ ಬಿ ಪೀತಾಂಬರ ಹೇರಾಜೆ ಯವರನ್ನು ನೇಮಕಗೊಳಿಸಿರುತ್ತಾರೆ.

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷರಾಗಿ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷರಾಗಿ, ಶ್ರೀ ಎಸ್ ಡಿ ಎಂ ಕಾಲೇಜು ಉಜಿರೆ ಇದರ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಪ್ರತಿಷ್ಠಿತ ಬಿಲ್ಲವ ಮನೆತನದ ಮುಗ್ಗಗುತ್ತಿನ ಆಡಳಿತ ಮೊಕ್ತೇಸರನಾಗಿ, ಸೇವೆಗೆಯುತ್ತಿದ್ದಾರೆ.

Related posts

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಪವನ್ ಸಾಲ್ಯಾನ್ ಆಯ್ಕೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya
error: Content is protected !!