25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರಂ ಕೊರತೆ; ಉಜಿರೆ ಗ್ರಾಮಸಭೆ ಮುಂದೂಡಿಕೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಫೆ.5ರಂದು ನಡೆಯಬೇಕಿದ್ದ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಕೋರಂ ಕೊರತೆಯಿಂದಾಗಿ ಮುಂದೂಡಲಾಗಿದೆ ಎಂದು ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು.

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಗ್ರಾಮಸ್ಥರು ಈ ಕೆಲಸದಲ್ಲಿ ನಿರತರಾಗಿರುವ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಅಸಾಧ್ಯ ವಾಗಿರಬಹುದು, ಆಗಾಗಿ ಬ್ರಹ್ಮಕಲಶ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಭೆ ನಡೆಸಲು ಗ್ರಾಮಸ್ಥರು ಅಭಿಪ್ರಾಯಪಟ್ಟರು.

ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಎಂ.ಎಸ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ರೆಖ್ಯ: 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!