September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

ಗುಂಡೂರಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೀರ್ತಿ ಶೇಷ ಯಂ. ವಿಜಯರಾಜ ಅಧಿಕಾರಿಯವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮ ಫೆ.5ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಡಾ. ಧರಣೇಂದ್ರ ಜೈನ್ ಮಾತನಾಡಿ, ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರಾಗಿದ್ದ ಮಾರಗುತ್ತು ವಿಜಯರಾಜ ಅಧಿಕಾರಿಯವರ ಸದಾ ಸವಿನೆನಪು ಉಳಿಯುವಂತೆ ಟ್ರಸ್ಟ್ ಅಡಿಯಲ್ಲಿ ನಿರಂತರ ಸಮಾಜ ಸೇವೆ ಗೈಯಲಾಗುವುದು ಎಂದು ತಿಳಿಸಿದರು. ಶ್ರೀಮತಿ ರಾಜೇಶ್ವರಿ ವಿಜಯರಾಜ ಅಧಿಕಾರಿಯವರು ಪುಣ್ಯ ನಮನ ಸಲ್ಲಿಸಿ ಪುಷ್ಪಾಂಜಲಿ ಸಮರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಡಾ. ಸಂದ್ಯಾ ಧರಣೇಂದ್ರ ಜೈನ್, ಕೋಶಾಧಿಕಾರಿ ಕೃಷ್ಣಾನಂದ ಭಟ್, ಸದಸ್ಯರಾದ ಭಾಸ್ಕರ ಪೈ, ಭರತ್ ರಾಜ ಮುದ್ಯ, ಪಶುವೈದ್ಯ ಸುಕೀರ್ತ್ ಜೈನ್, ಸಂಜೀವ ಪೂಜಾರಿ ಮೂಡ್ಲ, ರಾಜೇಂದ್ರ, ಜಿನೇಶ್ ಜೈನ್ ಮತ್ತಿತ್ತರು ಉಪಸ್ಥಿತರಿದ್ದರು. ಟ್ರಸ್ಟ್ ನ ಕಾರ್ಯದರ್ಶಿ ಎಚ್. ಜಗದೀಶ್ ಕಾರ್ಯಕ್ರಮ ನಿರೂಪಿಸಿ, ಹೊನ್ನಯ್ಯ ಕಾಟಿಪಳ್ಳ ವಂದಿಸಿದರು.

Related posts

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕನ್ನಾಜೆ ಕಾರ್ಯಕ್ಷೇತ್ರದ ಪ್ರಬುದ್ಧ ಜ್ಞಾನ ವಿಕಾಸ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya
error: Content is protected !!