25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

ಗುಂಡೂರಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೀರ್ತಿ ಶೇಷ ಯಂ. ವಿಜಯರಾಜ ಅಧಿಕಾರಿಯವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮ ಫೆ.5ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಡಾ. ಧರಣೇಂದ್ರ ಜೈನ್ ಮಾತನಾಡಿ, ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರಾಗಿದ್ದ ಮಾರಗುತ್ತು ವಿಜಯರಾಜ ಅಧಿಕಾರಿಯವರ ಸದಾ ಸವಿನೆನಪು ಉಳಿಯುವಂತೆ ಟ್ರಸ್ಟ್ ಅಡಿಯಲ್ಲಿ ನಿರಂತರ ಸಮಾಜ ಸೇವೆ ಗೈಯಲಾಗುವುದು ಎಂದು ತಿಳಿಸಿದರು. ಶ್ರೀಮತಿ ರಾಜೇಶ್ವರಿ ವಿಜಯರಾಜ ಅಧಿಕಾರಿಯವರು ಪುಣ್ಯ ನಮನ ಸಲ್ಲಿಸಿ ಪುಷ್ಪಾಂಜಲಿ ಸಮರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಡಾ. ಸಂದ್ಯಾ ಧರಣೇಂದ್ರ ಜೈನ್, ಕೋಶಾಧಿಕಾರಿ ಕೃಷ್ಣಾನಂದ ಭಟ್, ಸದಸ್ಯರಾದ ಭಾಸ್ಕರ ಪೈ, ಭರತ್ ರಾಜ ಮುದ್ಯ, ಪಶುವೈದ್ಯ ಸುಕೀರ್ತ್ ಜೈನ್, ಸಂಜೀವ ಪೂಜಾರಿ ಮೂಡ್ಲ, ರಾಜೇಂದ್ರ, ಜಿನೇಶ್ ಜೈನ್ ಮತ್ತಿತ್ತರು ಉಪಸ್ಥಿತರಿದ್ದರು. ಟ್ರಸ್ಟ್ ನ ಕಾರ್ಯದರ್ಶಿ ಎಚ್. ಜಗದೀಶ್ ಕಾರ್ಯಕ್ರಮ ನಿರೂಪಿಸಿ, ಹೊನ್ನಯ್ಯ ಕಾಟಿಪಳ್ಳ ವಂದಿಸಿದರು.

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!