22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

ಧರ್ಮಸ್ಥಳ ಗ್ರಾಮದಲ್ಲಿರುವ ಶ್ರೀರಾಮ ಕ್ಷೇತ್ರವು ದಕ್ಷಿಣ ಭಾರತದ ಅಯೋಧ್ಯೆ ಎಂದೇ ಪ್ರಸಿದ್ಧವಾಗಿರುತ್ತದೆ. ಶ್ರೀ ಕ್ಷೇತ್ರದಲ್ಲಿರುವ ರಾಮಮಂದಿರವು ಮೂರು ಅಂತಸ್ತಿನಿಂದ ನಿರ್ಮಾಣಗೊಂಡಿದ್ದು ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಎರಡು ಶೈಲಿಗಳನ್ನು ಬಳಸಿ ನಿರ್ಮಾಣಗೊಂಡಿರುತ್ತದೆ.

ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಒಟ್ಟು ಎಂಟು ಸ್ಥಳಗಳಲ್ಲಿ ಶಾಖಾ ಮಠಗಳನ್ನು ಹೊಂದಿರುವ ಶ್ರೀ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರದ ಟ್ರಸ್ಟಿಯನ್ನಾಗಿ ಬೆಳ್ತಂಗಡಿಯ ನಿವಾಸಿ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ, ಧಾರ್ಮಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಸೇವೆಗೈಯ್ಯುತ್ತಿರುವ ಬಿ ಪೀತಾಂಬರ ಹೇರಾಜೆ ಯವರನ್ನು ನೇಮಕಗೊಳಿಸಿರುತ್ತಾರೆ.

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠ ಅಧ್ಯಕ್ಷರಾಗಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷರಾಗಿ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷರಾಗಿ, ಶ್ರೀ ಎಸ್ ಡಿ ಎಂ ಕಾಲೇಜು ಉಜಿರೆ ಇದರ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಪ್ರತಿಷ್ಠಿತ ಬಿಲ್ಲವ ಮನೆತನದ ಮುಗ್ಗಗುತ್ತಿನ ಆಡಳಿತ ಮೊಕ್ತೇಸರನಾಗಿ, ಸೇವೆಗೆಯುತ್ತಿದ್ದಾರೆ.

Related posts

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮುಂಡಾಜೆ ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya
error: Content is protected !!