23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ವಿಕಲಚೇತನರ ದಿನದ ಆಚರಣೆ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5 ರಲ್ಲಿ ಕಾಯ್ದಿರಿಸಿದ ಮೊತ್ತದಲ್ಲಿ 90 ಮಂದಿ ಫಲಾನುಭವಿಗಳಿಗೆ ತಲಾ 7 ಸಾವಿರ ರೂ.ಗಳಂತೆ 6.30 ಲಕ್ಷ‌ ರೂ. ಪ್ರೋತ್ಸಾಹ ನಿಧಿ ಹಸ್ತಾಂತರಿಸಲಾಯಿತು.

ಫೆ.4 ರಂದು ಇಲ್ಲಿನ‌‌ ನೇತ್ರಾವತಿ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷೆ ವಿಮಲಾ ಅವರ ಅಧ್ಯಕ್ಷತೆಯಲ್ಲಿ‌ ಸಭೆ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ವಿಕಲಚೇತನರ ತಾಲೂಕು ಸಮನ್ವಯಾಧಿಕಾರಿ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜಾ ಇಲಾಖಾ‌ ಮಾಹಿತಿ‌ ನೀಡಿದರು.


ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕ ಅಶ್ರಫ್ ಆಲಿಕುಂಞಿ ಮುಂಡಾಜೆ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ‌ ನೀಡಿದರು.


ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಸದಸ್ಯರಾದ ಮುರಳಿ ಮತ್ತು ಸುನೀತಾ ಉಪಸ್ಥಿತರಿದ್ದರು.
ಅಭಿವೃದ್ಧಿ ಅಧಿಕಾರಿ ಗಾಯತ್ರಿ ದಿನೇಶ್ ಗೌಡ ಸ್ವಾಗತಿಸಿ ಪ್ರಸ್ತಾವನೆಗೈದರು. ‌ಗ್ರಾಮೀಣ‌ ಪುನರ್ವಸತಿ ಕಾರ್ಯಕರ್ತ ಹರೀಶ್ ವರದಿ ಮಂಡಿಸಿದರು.
ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಕಾರ್ಯಕ್ರಮ‌‌ ನಿರೂಪಿಸಿದರು.‌ ಕಾರ್ಯದರ್ಶಿ ಗಾಯತ್ರಿ ವಂದಿಸಿದರು.

Related posts

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!