22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ವಿಕಲಚೇತನರ ದಿನದ ಆಚರಣೆ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5 ರಲ್ಲಿ ಕಾಯ್ದಿರಿಸಿದ ಮೊತ್ತದಲ್ಲಿ 90 ಮಂದಿ ಫಲಾನುಭವಿಗಳಿಗೆ ತಲಾ 7 ಸಾವಿರ ರೂ.ಗಳಂತೆ 6.30 ಲಕ್ಷ‌ ರೂ. ಪ್ರೋತ್ಸಾಹ ನಿಧಿ ಹಸ್ತಾಂತರಿಸಲಾಯಿತು.

ಫೆ.4 ರಂದು ಇಲ್ಲಿನ‌‌ ನೇತ್ರಾವತಿ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷೆ ವಿಮಲಾ ಅವರ ಅಧ್ಯಕ್ಷತೆಯಲ್ಲಿ‌ ಸಭೆ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ವಿಕಲಚೇತನರ ತಾಲೂಕು ಸಮನ್ವಯಾಧಿಕಾರಿ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜಾ ಇಲಾಖಾ‌ ಮಾಹಿತಿ‌ ನೀಡಿದರು.


ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕ ಅಶ್ರಫ್ ಆಲಿಕುಂಞಿ ಮುಂಡಾಜೆ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ‌ ನೀಡಿದರು.


ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಸದಸ್ಯರಾದ ಮುರಳಿ ಮತ್ತು ಸುನೀತಾ ಉಪಸ್ಥಿತರಿದ್ದರು.
ಅಭಿವೃದ್ಧಿ ಅಧಿಕಾರಿ ಗಾಯತ್ರಿ ದಿನೇಶ್ ಗೌಡ ಸ್ವಾಗತಿಸಿ ಪ್ರಸ್ತಾವನೆಗೈದರು. ‌ಗ್ರಾಮೀಣ‌ ಪುನರ್ವಸತಿ ಕಾರ್ಯಕರ್ತ ಹರೀಶ್ ವರದಿ ಮಂಡಿಸಿದರು.
ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಕಾರ್ಯಕ್ರಮ‌‌ ನಿರೂಪಿಸಿದರು.‌ ಕಾರ್ಯದರ್ಶಿ ಗಾಯತ್ರಿ ವಂದಿಸಿದರು.

Related posts

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
error: Content is protected !!