September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ವಿಕಲಚೇತನರ ದಿನದ ಆಚರಣೆ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5 ರಲ್ಲಿ ಕಾಯ್ದಿರಿಸಿದ ಮೊತ್ತದಲ್ಲಿ 90 ಮಂದಿ ಫಲಾನುಭವಿಗಳಿಗೆ ತಲಾ 7 ಸಾವಿರ ರೂ.ಗಳಂತೆ 6.30 ಲಕ್ಷ‌ ರೂ. ಪ್ರೋತ್ಸಾಹ ನಿಧಿ ಹಸ್ತಾಂತರಿಸಲಾಯಿತು.

ಫೆ.4 ರಂದು ಇಲ್ಲಿನ‌‌ ನೇತ್ರಾವತಿ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷೆ ವಿಮಲಾ ಅವರ ಅಧ್ಯಕ್ಷತೆಯಲ್ಲಿ‌ ಸಭೆ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ವಿಕಲಚೇತನರ ತಾಲೂಕು ಸಮನ್ವಯಾಧಿಕಾರಿ ಜೋನ್‌ ಬ್ಯಾಪ್ಟಿಸ್ಟ್ ಡಿಸೋಜಾ ಇಲಾಖಾ‌ ಮಾಹಿತಿ‌ ನೀಡಿದರು.


ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕ ಅಶ್ರಫ್ ಆಲಿಕುಂಞಿ ಮುಂಡಾಜೆ ಬ್ಯಾಂಕಿನ ಸೌಲಭ್ಯಗಳ ಬಗ್ಗೆ ಮಾಹಿತಿ‌ ನೀಡಿದರು.


ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.
ವೇದಿಕೆಯಲ್ಲಿ ಸದಸ್ಯರಾದ ಮುರಳಿ ಮತ್ತು ಸುನೀತಾ ಉಪಸ್ಥಿತರಿದ್ದರು.
ಅಭಿವೃದ್ಧಿ ಅಧಿಕಾರಿ ಗಾಯತ್ರಿ ದಿನೇಶ್ ಗೌಡ ಸ್ವಾಗತಿಸಿ ಪ್ರಸ್ತಾವನೆಗೈದರು. ‌ಗ್ರಾಮೀಣ‌ ಪುನರ್ವಸತಿ ಕಾರ್ಯಕರ್ತ ಹರೀಶ್ ವರದಿ ಮಂಡಿಸಿದರು.
ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಕಾರ್ಯಕ್ರಮ‌‌ ನಿರೂಪಿಸಿದರು.‌ ಕಾರ್ಯದರ್ಶಿ ಗಾಯತ್ರಿ ವಂದಿಸಿದರು.

Related posts

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!