September 6, 2026
ಬೆಳ್ತಂಗಡಿವರದಿ

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

ಬೆಳ್ತಂಗಡಿ: ದೇಶದಲ್ಲಿ ಶೋಷಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರ ಹೋರಾಟ ನಡೆಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ಫೆ.10 ರಿಂದ ಮಾರ್ಚ್ 10 ರವರೆಗೆ ಎಸ್‌ಡಿಪಿಐ ಸೇರೋಣ ಜನ ಸಾಮಾನ್ಯರ ಧ್ವನಿಗೆ ಶಕ್ತಿ ನೀಡೋಣ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2009ರಲ್ಲಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ಎಸ್‌ಡಿಪಿಐ ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡದೆ, ಜನರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ,ಫ್ಯಾಶಿಸಂ ವಿರುದ್ಧವಾಗಿ ರಾಜಿಯಿಲ್ಲದ ಹೋರಾಟ ನಡೆಸುತ್ತಾ ಬಂದಿದೆ. ಹಸಿವು ಮುಕ್ತ ಮತ್ತು ಭಯ ಮುಕ್ತ ಸಮಾಜದ ನಿರ್ಮಾಣವೇ ಪಕ್ಷದ ಮುಖ್ಯ ಗುರಿಯಾಗಿದ್ದು, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಜನಸಾಮಾನ್ಯರನ್ನು ಸಂಘಟಿಸುವಲ್ಲಿ ಪಕ್ಷವು ಮುಂಚೂಣಿಯಲ್ಲಿದೆ.

ಸಂವಿಧಾನ ಪ್ರೇಮಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವ ನವಾಝ್ ಕಟ್ಟೆ ಅವರು, “ವ್ಯವಸ್ಥೆಯ ಬದಲಾವಣೆಗಾಗಿ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಇಂದಿನ ಕಾಲಘಟ್ಟದಲ್ಲಿ ಸಂಘಟಿತ ಶಕ್ತಿ ಅನಿವಾರ್ಯವಾಗಿದೆ. ಆದ್ದರಿಂದ ಸಂವಿಧಾನ ಪ್ರಿಯ ನಾಗರಿಕರು, ವಿಶೇಷವಾಗಿ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಎಸ್‌ಡಿಪಿಐ ಸದಸ್ಯತ್ವ ಪಡೆಯುವ ಮೂಲಕ ಜನಪರ ಹೋರಾಟಕ್ಕೆ ಬಲ ತುಂಬಬೇಕು” ಎಂದು ಕೋರಿದ್ದಾರೆ.ಫೆಬ್ರವರಿ 10 ರಂದು ಜಿಲ್ಲೆಯಾಧ್ಯಂತ ಆರಂಭಗೊಳ್ಳಲಿರುವ ಸದಸ್ಯತ್ವ ಅಭಿಯಾನದಲ್ಲಿ ನಮ್ಮ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಹೊಸ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳ ಜಂಟಿ ವೀಕ್ಷಣೆ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
error: Content is protected !!