23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ಜಯಶ್ರೀಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಗ್ರಾಮದ ಅಭಿವೃದ್ಧಿಗೆ ಯೋಜನೆಯು ಆಧಾರವಾಗಿ ನಿಂತು ಅದೆಷ್ಟೋ ಕುಟುಂಬಗಳ ಬದುಕನ್ನು ಬೆಳಗಿಸಿದೆ, ಒಂದು ಮನೆಯಲ್ಲಿ ಮನೆಯ ಪೂರ್ಣವಾದ ಮೂಲಭೂತ ಸೌಕರ್ಯ ಇಲ್ಲದೆ, ಆ ಮನೆಯಲ್ಲಿ ಜೀವನವನ್ನು ಕಳೆಯುತ್ತಿದ್ದ ಜಯಶ್ರೀರವರ ಮನೆಯನ್ನು ಗುರುತಿಸಿ, ಜಯಶ್ರೀ ರವರಿಗೆ ಸುಂದರವಾದ ವಾತ್ಸಲ್ಯ ಮನೆಯನ್ನು ಯೋಜನೆಯ ವತಿಯಿಂದ ನಿರ್ಮಿಸಿ ಸಂತೋಷದಿಂದ ಈ ಮನೆಯನ್ನು ಹೇಮಾವತಿ ವೀ ಹೆಗ್ಗಡೆಯವರು ಹಸ್ತಾಂತರಿಸಿ, ಬದುಕಿನ ದಿನನಿತ್ಯ ಉಪಯೋಗದ ಸಾಮಗ್ರಿಗಳ ವಾತ್ಸಲ್ಯ ಕಿಟ್ ವಿತರಿಸಿದರು.

ಬಳಿಕ ಮಾತನಾಡಿದ ಅವರು ನಾವು ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ, ನಮ್ಮ ಮಕ್ಕಳಿಗೆ ಶಿಕ್ಷನದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿದಾಗ ಮಾತ್ರ ಕೊನೆ ಕಾಲಕ್ಕೆ ನಮಗೆ ಅಸರೆಯಾಗುತ್ತಾರೆ,ಇಂದು ಇದ್ದ ಪರಿಸ್ಥಿತಿಗಳು ನಾಳೆ ಇರುವುದಿಲ್ಲ, ಬದುಕಿನಲ್ಲಿ ಒಂದು ಒಂದು ಮೆಟ್ಟಿಲುಗಳನ್ನು ಹತ್ತಿಯೇ ಮೇಲಕ್ಕೆ ಹೋಗಬೇಕಾಗುತ್ತದೆ, ಅಂತೆಯೇ ಜೀವನದಲ್ಲಿ ಕಷ್ಟ ಸುಖಗಳನ್ನು ಸಮಾನವಾಗಿ ಸ್ವೀಕರಿಸಿ, ಬದುಕಿನಲ್ಲಿ ಯಶಸ್ಸನ್ನು ಪಡೆಯಬೇಕು ಎಂದರು.

ರಾಜ್ಯಾದ್ಯಂತ ವಾತ್ಸಲ್ಯ ಮನೆಯನ್ನು ಇಂದು ನಿರ್ಮಿಸುತ್ತಿದ್ದು, ಆದರೆ ಪ್ರತಿಯೊಂದು ಕಡೆಯಲ್ಲಿಯೂ ಕೂಡ ಅನೇಕ ಸಮಸ್ಯೆಗಳಿಂದ ಒಬ್ಬಂಟಿಯಾಗಿ ಜೀವನವನ್ನು ನಡೆಸುತ್ತಿರುವ ಅನೇಕರಿಗೆ ಹಾಗೂ ಅಸಹಾಯಕರಿಗೆ ಇಂದು ಕೂಡ ಪೂರ್ಣ ಸೌಕರ್ಯದ ಮನೆಯು ಇಲ್ಲದೆ ಇರುವುದನ್ನು ಗಮನಿಸಿ ಇಂದು ವಾತ್ಸಲ್ಯ ಮನೆಯನ್ನು ಪೂರ್ಣ ವ್ಯವಸ್ಥೆಗಳೊಂದಿಗೆ ರಾಜ್ಯದ್ಯಂತ ಅಲ್ಲಿಯ ಸ್ಥಿತಿಗತಿಗಳನ್ನು ಗಮನಿಸಿ ವಾಸ್ತಲ್ಯ ಮನೆಯನ್ನು ನಿರ್ಮಿಸಿ ಕೊಡಲಾಗುತ್ತಿದೆ.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿ ಹರೀಶ್ ಕೃಷ್ಣ, ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕ ಜಯರಾಮ್, ಜ್ಞಾನವಿಕಾಸ ವಿಭಾಗದ ನಿರ್ದೇಶಕ ವಿಠಲ್ ಪೂಜಾರಿ, ನಿರ್ದೇಶಕ ದಿನೇಶ್ ಪೂಜಾರಿ, ಯೋಜನಾಧಿಕಾರಿ ಯಶೋಧರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀರ್, ಜನಜಾಗೃತಿ ತಾಲೂಕು ವೇದಿಕೆ ಸದಸ್ಯರು ಸ್ಥಳೀಯ ಗಣ್ಯರು ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸದಸ್ಯರು, ಶೌರ್ಯ ವಿಪತ್ತು ಘಟಕದ ಸ್ವಯಂಸೇವಕರು, ಜ್ಞಾನವಿಕಾಸದ ಸಮನ್ವಯಾಧಿಕಾರಿ ಮಧುರ ವಸಂತ್ ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!