ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಅವರ ಅಧ್ಯಕ್ಷತೆಯಲ್ಲಿ ಫೆ.5ರಂದು ನಡೆಯಬೇಕಿದ್ದ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಕೋರಂ ಕೊರತೆಯಿಂದಾಗಿ ಮುಂದೂಡಲಾಗಿದೆ ಎಂದು ಸಭೆಯಲ್ಲಿ ಅಧ್ಯಕ್ಷರು ತಿಳಿಸಿದರು.

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಗ್ರಾಮಸ್ಥರು ಈ ಕೆಲಸದಲ್ಲಿ ನಿರತರಾಗಿರುವ ಕಾರಣ ಸಭೆಯಲ್ಲಿ ಪಾಲ್ಗೊಳ್ಳಲು ಅಸಾಧ್ಯ ವಾಗಿರಬಹುದು, ಆಗಾಗಿ ಬ್ರಹ್ಮಕಲಶ ಕಾರ್ಯಕ್ರಮ ಪೂರ್ಣಗೊಂಡ ಬಳಿಕ ಸಭೆ ನಡೆಸಲು ಗ್ರಾಮಸ್ಥರು ಅಭಿಪ್ರಾಯಪಟ್ಟರು.
ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಎಂ.ಎಸ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.















