July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

ಗುಂಡೂರಿ: ಗುಂಡೂರಿ ಗ್ರಾಮದ ಶ್ರೀ ಗುರು ಚೈತನ್ಯ ಸೇವಾಶ್ರಮದಲ್ಲಿ ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೀರ್ತಿ ಶೇಷ ಯಂ. ವಿಜಯರಾಜ ಅಧಿಕಾರಿಯವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ಕಾರ್ಯಕ್ರಮ ಫೆ.5ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಡಾ. ಧರಣೇಂದ್ರ ಜೈನ್ ಮಾತನಾಡಿ, ವಿವೇಕಾನಂದ ಸೇವಾ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರಾಗಿದ್ದ ಮಾರಗುತ್ತು ವಿಜಯರಾಜ ಅಧಿಕಾರಿಯವರ ಸದಾ ಸವಿನೆನಪು ಉಳಿಯುವಂತೆ ಟ್ರಸ್ಟ್ ಅಡಿಯಲ್ಲಿ ನಿರಂತರ ಸಮಾಜ ಸೇವೆ ಗೈಯಲಾಗುವುದು ಎಂದು ತಿಳಿಸಿದರು. ಶ್ರೀಮತಿ ರಾಜೇಶ್ವರಿ ವಿಜಯರಾಜ ಅಧಿಕಾರಿಯವರು ಪುಣ್ಯ ನಮನ ಸಲ್ಲಿಸಿ ಪುಷ್ಪಾಂಜಲಿ ಸಮರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಡಾ. ಸಂದ್ಯಾ ಧರಣೇಂದ್ರ ಜೈನ್, ಕೋಶಾಧಿಕಾರಿ ಕೃಷ್ಣಾನಂದ ಭಟ್, ಸದಸ್ಯರಾದ ಭಾಸ್ಕರ ಪೈ, ಭರತ್ ರಾಜ ಮುದ್ಯ, ಪಶುವೈದ್ಯ ಸುಕೀರ್ತ್ ಜೈನ್, ಸಂಜೀವ ಪೂಜಾರಿ ಮೂಡ್ಲ, ರಾಜೇಂದ್ರ, ಜಿನೇಶ್ ಜೈನ್ ಮತ್ತಿತ್ತರು ಉಪಸ್ಥಿತರಿದ್ದರು. ಟ್ರಸ್ಟ್ ನ ಕಾರ್ಯದರ್ಶಿ ಎಚ್. ಜಗದೀಶ್ ಕಾರ್ಯಕ್ರಮ ನಿರೂಪಿಸಿ, ಹೊನ್ನಯ್ಯ ಕಾಟಿಪಳ್ಳ ವಂದಿಸಿದರು.

Related posts

ಜಮೀಯ್ಯತುಲ್ ಪಲಾಹ್ ಬೆಳ್ತಂಗಡಿ ವತಿಯಿಂದ ಪ್ರತಿಭಾ ಪುರಸ್ಕಾರ, ರೂ. 3 ಲಕ್ಷ‌ ವಿದ್ಯಾರ್ಥಿವೇತನ ವಿತರಣೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಮಾಲಾಡಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya
error: Content is protected !!